July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ವಿಭಾಗ ಮಂಗಳೂರು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಅರ್ಹ 212 ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಉಚಿತ ಸುಧಾರಿತ ಉಪಕರಣಗಳನ್ನು ಜು.28ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಫಲಾನುಭವಿಗಳಿಗೆ ವಿತರಿಸಿದರು.

ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ವೃತ್ತಿ ಬದುಕು ನಡೆಸುತ್ತಿರುವವರನ್ನು ಗುರುತಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಬೆಳ್ತಂಗಡಿಯಲ್ಲಿ ನಿರಂತರವಾಗಿ ಮಾಡಲಾಗುತ್ತಿದೆ. ಸರ್ಕಾರದ ಎಲ್ಲ ಯೋಜನೆಗಳನ್ನು ಪಾರದರ್ಶಕವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮುಂದುವರಿಸಲಾಗುವುದು. ವಿತರಿಸಲಾದ ಸಲಕರಣೆಗಳು ಫಲಾನುಭವಿಗಳ ಬದುಕಿಗೆ ಶಕ್ತಿಯಾಗಿ, ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗಲಿ ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಅವರು ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಮಾಹಿತಿ ನೀಡಿದರು. ವೇದಿಕೆಯಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಅವರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!