27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ವಿಭಾಗ ಮಂಗಳೂರು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಅರ್ಹ 212 ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಉಚಿತ ಸುಧಾರಿತ ಉಪಕರಣಗಳನ್ನು ಜು.28ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಫಲಾನುಭವಿಗಳಿಗೆ ವಿತರಿಸಿದರು.

ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ವೃತ್ತಿ ಬದುಕು ನಡೆಸುತ್ತಿರುವವರನ್ನು ಗುರುತಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಬೆಳ್ತಂಗಡಿಯಲ್ಲಿ ನಿರಂತರವಾಗಿ ಮಾಡಲಾಗುತ್ತಿದೆ. ಸರ್ಕಾರದ ಎಲ್ಲ ಯೋಜನೆಗಳನ್ನು ಪಾರದರ್ಶಕವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮುಂದುವರಿಸಲಾಗುವುದು. ವಿತರಿಸಲಾದ ಸಲಕರಣೆಗಳು ಫಲಾನುಭವಿಗಳ ಬದುಕಿಗೆ ಶಕ್ತಿಯಾಗಿ, ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗಲಿ ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಅವರು ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಮಾಹಿತಿ ನೀಡಿದರು. ವೇದಿಕೆಯಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಅವರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!