July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕದಲ್ಲಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪೆರಿಯಡ್ಕ,ಮತ್ತು ಶಾಲಾಭಿವೃದ್ಧಿ ಸಮಿತಿ ಪೆರಿಯಡ್ಕ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ನಡೆಯಿತು..

ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಭಾಷಣ, ಪ್ರಬಂಧ ಸ್ಪರ್ಧೆ, ಎಲೆ ಗುರುತಿಸುವಿಕೆ, ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ನೀಡಲಾಯಿತು. ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಿದ್ದು, ಶಾಲಾ ಪೋಷಕರಿಗೆ ಮತ್ತು ಒಕ್ಕೂಟದ ಸದಸ್ಯರಿಗೆ ಗಿಡಗಳನ್ನು ವಿತರಿಸಿದರು.

ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ರವರು, ಪರಿಸರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ನಮ್ಮಿಂದ ಪರಿಸರವಲ್ಲ ಪರಿಸರದಿಂದ ನಾವು,, ಹಿಂದಿನ ತಲೆಮಾರು ನಮಗೆ ಸ್ವಚ್ಛಂದವಾದ ಗಿಡಮರಗಳ ಪರಿಸರವನ್ನು ನಮಗೆ ಹತ್ತಾಂತರಿಸಿದ್ದಾರೆ, ಇದನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೆ ಹಾಗೆಯೇ ಉಳಿಸಿ, ಕೊಡುವುದು ನಮ್ಮ ಜವಾಬ್ದಾರಿಯಾಗಿದೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ಪರಿಸರ ಕಾರ್ಯಕ್ರಮವನ್ನು ಆಯೋಜಿಸಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸೋಮನಾಥ ಗೌಡ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಪೆರಿಯಡ್ಕ ಒಕ್ಕೂಟದ ಕಾರ್ಯದರ್ಶಿ, ರವಿತ್ ಕುಮಾರ್, ಶಾಲಾ ಸಹ ಶಿಕ್ಷಕರಾದ ಮಲ್ಲಿಕಾರ್ಜುನ ಎನ್, ಅತಿಥಿ ಶಿಕ್ಷಕರಾದ ಜೋಶ್ಣ, ವಲಯ ಮೇಲ್ವಿಚಾರಕರಾದ ಗಣೇಶ್, ಸೇವಾಪ್ರತಿನಿಧಿ ಶ್ರೀಮತಿ ದಿವ್ಯ, ಒಕ್ಕೂಟದ ಹಾಗೂ ಎಸ್.ಡಿ.ಎಮ್.ಸಿ ಸದಸ್ಯರು, ಉಪಸ್ಥಿತರಿದ್ದು ಗಿಡ ನಾಟಿಯನ್ನು ಮಾಡಿದರು. ಶಾಲಾ ಮಕ್ಕಳು ಉಪಸ್ಥಿತರಿದ್ದು ಮಾಹಿತಿಯನ್ನು ಪಡೆದರು.
ಶಾಲಾ ಮುಖ್ಯೋಪಾಧ್ಯಾಯರಾದ ಮೇರಿ ಎನ್.ಜೆ ನಿರೂಪಿಸಿ ಸ್ವಾಗತಿಸಿದರು..

Related posts

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!