July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ–ಬಳ್ಳಮಂಜದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೂತನ ಶಾಖೆ ಉದ್ಘಾಟನೆ

ಬಳ್ಳಮಂಜ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು ಇದರ ಆಶ್ರಯದಲ್ಲಿ ಮಚ್ಚಿನ ಸಮುದಾಯ ಭವನದಲ್ಲಿ ನೂತನ ಯೋಗ ಶಿಕ್ಷಣ ಶಾಖೆಯನ್ನು ಜು.26ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೋಕ್ತೇಸರರಾದ ಡಾ. ಎಂ. ಹರ್ಷ ಸಂಪಿಗೆತ್ತಾಯ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಸಮಿತಿಯ ನೇತ್ರಾವತಿ ವಲಯ ಸಂಚಾಲಕರಾದ ಅಶೋಕ್ ಪ್ರಾಸ್ತಾವಿಕ ನುಡಿಗಳ ಮೂಲಕ ಸಮಿತಿಯ ಉದ್ದೇಶ ಹಾಗೂ ಯೋಗದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಷಮರ್ದಿನಿ ಶಾಖೆಯ ಸಹ ಶಿಕ್ಷಕ ಸುಧಾಕರ್ ವಹಿಸಿದ್ದರು. ಯೋಗ ಶಿಬಿರಾರ್ಥಿಗಳಾದ ದಿವಾಕರ್, ಉಮಾ ಹಾಗೂ ನಾರಾಯಣ ಅವರು ಯೋಗಾಭ್ಯಾಸದಿಂದ ತಮ್ಮ ಜೀವನದಲ್ಲಿ ಕಂಡ ಬದಲಾವಣೆ ಹಾಗೂ ಅನುಭವಗಳನ್ನು ಹಂಚಿಕೊಂಡರು .ಸಹ ಶಿಕ್ಷಕ ಸುಕೇಶ್ ಉಪಸ್ಥಿತರಿದ್ದರು.

ಕುಮಾರಿ ಭಕ್ತಿಪ್ರಿಯ ಪ್ರಾರ್ಥನೆ ನೆರವೇರಿಸಿ, ಉಮಾ ಸ್ವಾಗತಿಸಿದರು.ಅಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಬಾಲಕೃಷ್ಣ ವಂದಿಸಿದರು. ಸುಧಾ ಸೂಚನೆಗಳನ್ನು ನೀಡಿದರು.

Related posts

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya
error: Content is protected !!