ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಲಯನ್ಸ್ ಸೇವಾ ಭವನ, ಬೆಳ್ತಂಗಡಿ ಶಾಖೆಯಲ್ಲಿ ಗುರು ಪೂರ್ಣಿಮೆಯನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಪ್ರತಿದಿನದ ಯೋಗಾಭ್ಯಾಸದ ನಂತರ ಯೋಗ ಬಂಧುಗಳು ತಮ್ಮ ಜೀವನದಲ್ಲಿ ಜ್ಞಾನ, ಸಂಸ್ಕಾರ ಹಾಗೂ ಆರೋಗ್ಯದ ದಾರಿಯನ್ನು ತೋರಿದ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಶ್ವತ್ ಭಕ್ತಿರಸಪೂರ್ಣ ಭಜನೆ ನಡೆಸಿಕೊಟ್ಟು ಎಲ್ಲರ ಮನಸ್ಸನ್ನು ಭಕ್ತಿಭಾವದಲ್ಲಿ ತೇಲಿಸಿದರು.
ರವಿಕಲಾ ಗುರುಗಳ ಮಹತ್ವ, ಯೋಗದ ಮೌಲ್ಯ ಹಾಗೂ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯ ವೈಶಿಷ್ಟ್ಯವನ್ನು ಮನಮುಟ್ಟುವಂತೆ ಬೌದ್ಧಿಕದ ಮೂಲಕ ವಿವರಿಸಿದರು.
ಪೂರ್ಣಾವಧಿಯ ಯೋಗ ತರಗತಿಯನ್ನು ಗೀತಾ ನಡೆಸಿಕೊಟ್ಟರು. ಗಣಪತಿ ವಂದಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಯೋಗ ಬಂಧುಗಳು ಗುರುಗಳ ಆಶೀರ್ವಾದವೇ ಜೀವನದ ನಿಜವಾದ ಸಂಪತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಯೋಗದ ಮೂಲಕ ಆರೋಗ್ಯವಂತ ಹಾಗೂ ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
















