25 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಲಯನ್ಸ್ ಸೇವಾ ಭವನ, ಬೆಳ್ತಂಗಡಿ ಶಾಖೆಯಲ್ಲಿ ಗುರು ಪೂರ್ಣಿಮೆಯನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಪ್ರತಿದಿನದ ಯೋಗಾಭ್ಯಾಸದ ನಂತರ ಯೋಗ ಬಂಧುಗಳು ತಮ್ಮ ಜೀವನದಲ್ಲಿ ಜ್ಞಾನ, ಸಂಸ್ಕಾರ ಹಾಗೂ ಆರೋಗ್ಯದ ದಾರಿಯನ್ನು ತೋರಿದ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಶ್ವತ್ ಭಕ್ತಿರಸಪೂರ್ಣ ಭಜನೆ ನಡೆಸಿಕೊಟ್ಟು ಎಲ್ಲರ ಮನಸ್ಸನ್ನು ಭಕ್ತಿಭಾವದಲ್ಲಿ ತೇಲಿಸಿದರು.

ರವಿಕಲಾ ಗುರುಗಳ ಮಹತ್ವ, ಯೋಗದ ಮೌಲ್ಯ ಹಾಗೂ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯ ವೈಶಿಷ್ಟ್ಯವನ್ನು ಮನಮುಟ್ಟುವಂತೆ ಬೌದ್ಧಿಕದ ಮೂಲಕ ವಿವರಿಸಿದರು.

ಪೂರ್ಣಾವಧಿಯ ಯೋಗ ತರಗತಿಯನ್ನು ಗೀತಾ ನಡೆಸಿಕೊಟ್ಟರು. ಗಣಪತಿ ವಂದಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಯೋಗ ಬಂಧುಗಳು ಗುರುಗಳ ಆಶೀರ್ವಾದವೇ ಜೀವನದ ನಿಜವಾದ ಸಂಪತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಯೋಗದ ಮೂಲಕ ಆರೋಗ್ಯವಂತ ಹಾಗೂ ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

Related posts

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya
error: Content is protected !!