ಬೆಳ್ತಂಗಡಿ: ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ ಉಜಿರೆಯ ಪ್ರಸಿದ್ದ ದಂತ ಚಿಕಿತ್ಸಾಲಯ ವೈದ್ಯರು,ಕೆವಿಜಿ ದಂತ ಕಾಲೇಜು ಮತ್ತು ಆಸ್ಪತ್ರೆಯ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಎಂ. ದಯಾಕರ್ ಅವರನ್ನು “ಹೆಲ್ತ್ಕೇರ್ ಎಕ್ಸಲೆನ್ಸ್ ಅವಾರ್ಡ್–2026 ಗೆ ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯನ್ನು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 2, 2026ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಕಾನ್ರಾಡ್ ಹೋಟೆಲ್ ನಲ್ಲಿ ನಡೆಯಲಿದೆ. ಆರೋಗ್ಯ ಕ್ಷೇತ್ರಕ್ಕೆ ಡಾ. ದಯಾಕರ್ ಅವರು ನೀಡಿರುವ ಅಮೂಲ್ಯ ಸೇವೆ, ಸಮರ್ಪಣೆ ಹಾಗೂ ವೃತ್ತಿಪರ ಸಾಧನೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
















