25.6 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ.ಎಸ್.ಡಿ ಶೆಟ್ಟಿ ನಿಧನಕ್ಕೆ ದ. ಕ.ಜಿಲ್ಲಾ ಕ.ಸಾ.ಪ ಸಂತಾಪ

ಬೆಳ್ತಂಗಡಿ: ಡಾ ಎಸ್.ಡಿ. ಶೆಟ್ಟಿ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ,ವಿಭಾಗ ಮುಖ್ಯಸ್ಥರಾಗಿ ಮತ್ತು ಡಾ. ಹಾ.ಮಾ.ನಾ ಸಂಶೋಧನಾ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿ ಸುಮಾರು 51 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾದರು . ಅಲ್ಲದೆ, ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂ ಕಟ್ಟುವಲ್ಲಿ ವಿಶೇಷವಾದಂತಹ ಶ್ರಮವನ್ನು ವಹಿಸಿದವರು. ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನದಯೂ ಕೂಡ ಇವರು ಅನನ್ಯ ಸೇವೆಯನ್ನು ಸಲ್ಲಿಸಿದರು.

ಹಸ್ತಪ್ರತಿಯ ಅಧ್ಯಯನ ಶಾಸನಗಳ ಅಧ್ಯಯನ, ಇತಿಹಾಸದ ಅಧ್ಯಯನ ಇವರ ವಿಶೇಷ ಆಸಕ್ತಿಯ ಕ್ಷೇತ್ರಗಳು ಕೂಡ ಆಗಿದ್ದವು. ಇವರು ಕನ್ನಡ ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಗುರುತಿಸಿ ಇಳಂತಿಲ ದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೌರವಿಸಲಾಗಿದೆ.

ಸಂಶೋಧನೆಯಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಇವರು ಈ ದಿನ ನಮ್ಮನ್ನು ಅಗಲಿದ್ದಾರೆ ಎಂಬುದನ್ನು ತಿಳಿಸಲು ಅತ್ಯಂತ ದುಃಖವಾಗುತ್ತಿದೆ .ಇವರ ನಿಧನದಿಂದ ಹಿರಿಯ ತಲೆಮಾರಿನ ಸಾಹಿತ್ಯ ಸಂಶೋಧಕರು ಒಬ್ಬರನ್ನು ಕಳೆದುಕೊಂಡಂತಾಗಿದೆ .
ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು,ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು
ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!