25.6 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

ಬೆಳ್ತಂಗಡಿ:ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 29ರಿಂದ ಸೆಪ್ಟೆಂಬರ್ 14ರವರೆಗೆ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದ್ದು, ಬುಧವಾರ ಗುರುಪೂರ್ಣಿಮೆಯ ಶುಭ ಸಂದರ್ಭದಲ್ಲಿ ವಿವಿಧ ವೈದಿಕ ವಿಧಿ-ವಿಧಾನಗಳೊಂದಿಗೆ ಅದ್ದೂರಿಯಾಗಿ ಚಾಲನೆ ದೊರೆಯಿತು.

ಬೆಳಿಗ್ಗೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತ ಸಂಕಲ್ಪದ ಅಂಗವಾಗಿ ರಾಮತಾರಕ ಯಜ್ಞ ನೆರವೇರಿತು. ಬಳಿಕ ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಶ್ರೀಗಳ ಪುರಪ್ರವೇಶದ ಭವ್ಯ ಮೆರವಣಿಗೆ ನಡೆದು, ನಂತರ ವ್ಯಾಸಪೀಠಾರೋಹಣ, ಧರ್ಮಸಭೆ, ಗುರುಪಾದುಕಾ ಪೂಜೆ ಹಾಗೂ ಶ್ರೀಗಳ ಆಶೀರ್ವಚನ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಯಶ್‌ಪಾಲ್ ಸುವರ್ಣ, ಡಾ. ವೈ. ಭರತ್ ಕುಮಾರ್ ಶೆಟ್ಟಿ,ಗುರ್ಮೆ ಸುರೇಶ್ ಶೆಟ್ಟಿ,ಮಾಜಿ ಶಾಸಕರಾದ ಸಂಜೀವ ಮಠಂದೂರು,ಸುನಿಲ್ ನಾಯ್ಕ್, ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಬಿಜೆಪಿ ಪ್ರಭಾರಿ ಜಯಂತ್ ಕೋಟ್ಯಾನ್, ಚಾತುರ್ಮಾಸ್ಯ ವ್ರತಾಚರಣೆ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ, ಗೌರವಾಧ್ಯಕ್ಷ ಕೆ. ಗೋಪಾಲ ಪೂಜಾರಿ, ಸಂಚಾಲಕ ಶಿವರಾಜ್ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಎಲ್. ಪೂಜಾರಿ ಹಾಗೂ ಅಶೋಕ್ ಪೂಜಾರಿ, ಅರ್ಚಕ ವಾಸುದೇವ ಹೊಳ್ಳ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ರಾಜಕೀಯ ನಾಯಕರು, ದೇವಸ್ಥಾನದ ಟ್ರಸ್ಟಿಗಳು, ಶ್ರೀ ರಾಮ ಕ್ಷೇತ್ರ ಸಮಿತಿ ಹಾಗೂ ಚಾತುರ್ಮಾಸ್ಯ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.

ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಉಪನ್ಯಾಸಕ ಕೇಶವ ಬಂಗೇರ ಅವರು ನೆರವೇರಿಸಿದರು. ಬಳಿಕ ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

Related posts

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya
error: Content is protected !!