July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಲಯನ್ಸ್ ಸೇವಾ ಭವನ, ಬೆಳ್ತಂಗಡಿ ಶಾಖೆಯಲ್ಲಿ ಗುರು ಪೂರ್ಣಿಮೆಯನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಪ್ರತಿದಿನದ ಯೋಗಾಭ್ಯಾಸದ ನಂತರ ಯೋಗ ಬಂಧುಗಳು ತಮ್ಮ ಜೀವನದಲ್ಲಿ ಜ್ಞಾನ, ಸಂಸ್ಕಾರ ಹಾಗೂ ಆರೋಗ್ಯದ ದಾರಿಯನ್ನು ತೋರಿದ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಶ್ವತ್ ಭಕ್ತಿರಸಪೂರ್ಣ ಭಜನೆ ನಡೆಸಿಕೊಟ್ಟು ಎಲ್ಲರ ಮನಸ್ಸನ್ನು ಭಕ್ತಿಭಾವದಲ್ಲಿ ತೇಲಿಸಿದರು.

ರವಿಕಲಾ ಗುರುಗಳ ಮಹತ್ವ, ಯೋಗದ ಮೌಲ್ಯ ಹಾಗೂ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯ ವೈಶಿಷ್ಟ್ಯವನ್ನು ಮನಮುಟ್ಟುವಂತೆ ಬೌದ್ಧಿಕದ ಮೂಲಕ ವಿವರಿಸಿದರು.

ಪೂರ್ಣಾವಧಿಯ ಯೋಗ ತರಗತಿಯನ್ನು ಗೀತಾ ನಡೆಸಿಕೊಟ್ಟರು. ಗಣಪತಿ ವಂದಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಯೋಗ ಬಂಧುಗಳು ಗುರುಗಳ ಆಶೀರ್ವಾದವೇ ಜೀವನದ ನಿಜವಾದ ಸಂಪತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಯೋಗದ ಮೂಲಕ ಆರೋಗ್ಯವಂತ ಹಾಗೂ ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya
error: Content is protected !!