25.6 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಗುಣಮಟ್ಟದ ಉತ್ಪನ್ನಗಳು ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಬೆಳ್ತಂಗಡಿ ಭಾಗದ ಜನರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿಡಿಯಂ ಕಂಪನಿಯ ವಿಶೇಷ ಸರ್ವಿಸ್ ಕ್ಯಾಂಪ್‌ಗೆ ಜು 29ರಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಡಿವೈಎಸ್ಪಿ ರೋಹಿಣಿ ಸಿ.ಕೆ ಅವರು ಉದ್ಘಾಟಿಸಿದರು‌.

ಕಾರ್ಯಕ್ರಮದಲ್ಲಿ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ,ರೂರಲ್ ಡೆವಲಪ್ಮೆಂಟ್ ಸೊಸೈಟಿಯ ನಿರ್ದೇಶಕರಾದ ಫಾ. ಆದರ್ಶ್ ಜೋಸೇಫ್,ವಿಡಿಯಂ ಕಂಪನಿಯ ಪ್ರತಿನಿಧಿ ಲಿಖಿತ್,ಕೆನರಾ ಬ್ಯಾಂಕ್ ವ್ಯವಸ್ಥಾಪಕ ರಾಜ್ ಶೇಖರ್,ಪತ್ರಕರ್ತರಾದ ಅಶ್ರಫ್ ಆಲಿಕುಂಞ ಹಾಗೂ ಶಿಬಿ ಧರ್ಮಸ್ಥಳ, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯೆ ಮಿಶ್ರಿಯಾ, ಟೆಕ್ನಿಷಿಯನ್ ನಾಗೇಶ್, ಉಪನ್ಯಾಸಕಿ ಎಲೈಜಾ ಡಿಸೋಜಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಸೋಜಾ ಸಂಸ್ಥೆಯ ಮಾಲಕ ಅಲ್ಫೋನ್ಸಾ ಫ್ರಾಂಕೋ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಸಂಸ್ಥೆಯ ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾ ಹಾಗೂ ಸಿಬ್ಬಂದಿಗಳಾದ ಪವಿತ್ರ, ಶಶಿಕಲಾ, ಯಶೋಧ, ಭರತ್, ಸುಮಲತಾ, ನಿಮ್ಮಿ, ಥೋಮಸ್, ರಶ್ಮಿತಾ, ಪ್ರಮೀಳಾ ಶೆಟ್ಟಿ, ಲಿಖಿತಾ ಶೆಟ್ಟಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!