July 29, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

ವೇಣೂರು: ಬಜಿರೆ, ಪಡ್ಡಂದಡ್ಕ ಹಾಗೂ ನಿಟ್ಟಡೆ ವಲಯದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜುಲೈ 28ರಂದು ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಲೆಯ ಸಂಚಾಲಕಿ ಸಿಸ್ಟರ್ ಲಿಲ್ಲಿ ಗೋಮ್ಸ್ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಬಜಿರೆ, ಪಡ್ಡಂದಡ್ಕ, ನಿಟ್ಟಡೆ ವಲಯದ ಕ್ರೀಡಾ ಮೇಲ್ವಿಚಾರಕಿ ಹಾಗೂ ತಾಲೂಕು ಗ್ರೇಡ್-2 ಸಂಘದ ಕಾರ್ಯದರ್ಶಿ ಶ್ರೀಮತಿ ಆರತಿ, ಪ್ರಾಥಮಿಕ ತಾಲೂಕು ಘಟಕದ ಅಧ್ಯಕ್ಷ ರಾಜೇಶ್ ನೆಲ್ಯಾಡಿ, ನವಚೇತನ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ದಿವ್ಯ ಮಹೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀರಾ ಡಿಸೋಜಾ ಉಪಸ್ಥಿತರಿದ್ದು ಪಂದ್ಯಾಟಕ್ಕೆ ಶುಭ ಕೋರಿದರು.

ಪಂದ್ಯಾಟದಲ್ಲಿ 14 ವರ್ಷದೊಳಗಿನ ಬಾಲಕರ ಹಾಗೂ ಬಾಲಕಿಯರ ವಿಭಾಗಗಳಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡವು. ಈ ಸಾಧನೆಯೊಂದಿಗೆ ಬಾಲಕರ ಹಾಗೂ ಬಾಲಕಿಯರ ತಂಡಗಳು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಹೆಮ್ಮೆಯ ಕೀರ್ತಿ ತಂದಿವೆ.

Related posts

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya
error: Content is protected !!