July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಲಯನ್ಸ್ ಸೇವಾ ಭವನ, ಬೆಳ್ತಂಗಡಿ ಶಾಖೆಯಲ್ಲಿ ಗುರು ಪೂರ್ಣಿಮೆಯನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಪ್ರತಿದಿನದ ಯೋಗಾಭ್ಯಾಸದ ನಂತರ ಯೋಗ ಬಂಧುಗಳು ತಮ್ಮ ಜೀವನದಲ್ಲಿ ಜ್ಞಾನ, ಸಂಸ್ಕಾರ ಹಾಗೂ ಆರೋಗ್ಯದ ದಾರಿಯನ್ನು ತೋರಿದ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಶ್ವತ್ ಭಕ್ತಿರಸಪೂರ್ಣ ಭಜನೆ ನಡೆಸಿಕೊಟ್ಟು ಎಲ್ಲರ ಮನಸ್ಸನ್ನು ಭಕ್ತಿಭಾವದಲ್ಲಿ ತೇಲಿಸಿದರು.

ರವಿಕಲಾ ಗುರುಗಳ ಮಹತ್ವ, ಯೋಗದ ಮೌಲ್ಯ ಹಾಗೂ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯ ವೈಶಿಷ್ಟ್ಯವನ್ನು ಮನಮುಟ್ಟುವಂತೆ ಬೌದ್ಧಿಕದ ಮೂಲಕ ವಿವರಿಸಿದರು.

ಪೂರ್ಣಾವಧಿಯ ಯೋಗ ತರಗತಿಯನ್ನು ಗೀತಾ ನಡೆಸಿಕೊಟ್ಟರು. ಗಣಪತಿ ವಂದಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಯೋಗ ಬಂಧುಗಳು ಗುರುಗಳ ಆಶೀರ್ವಾದವೇ ಜೀವನದ ನಿಜವಾದ ಸಂಪತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಯೋಗದ ಮೂಲಕ ಆರೋಗ್ಯವಂತ ಹಾಗೂ ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya
error: Content is protected !!