ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ತೋಟಗಾರಿಕ ಇಲಾಖೆಯ ಅಧಿಕಾರಿ ಮಹಾವೀರ ಶೇಬಣ್ಣ ಅವರ ಅಧ್ಯಕ್ಷತೆಯಲ್ಲಿ ಜು.30 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ವೈದ್ಯಾಧಿಕಾರಿ ಪ್ರಶಾಂತ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿ ಪಶು ಸಂಗೋಪನ ಇಲಾಖೆಯ ಮಾಹಿತಿ ನೀಡಿದರು.
ಕಳೆದ ಸೆಪ್ಟೆಂಬರ್ ತಿಂಗಳಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಳ್ಳುತ್ತಿರುವ ಗಾಯತ್ರಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಗ್ರಾಮಸ್ಥರು ಅವರ ಸೇವಾ ಕಾರ್ಯದ ಬಗ್ಗೆ ಗ್ರಾಮಸಭೆಯಲ್ಲಿ ಶ್ಲಾಘನೆ ವ್ಯಕ್ತ ಪಡಿಸುವ ಮೂಲಕ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ನ ಶೇ.25 ಹಣಕಾಸಿನಲ್ಲಿ ಫಲಾನುಭವಿಗಳಿಗೆ ಸಹಾಯ ಧನ ಹಸ್ತಾಂತರಿಸಲಾಯಿತು.
ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಅವರು ವರದಿ ಮಂಡಿಸಿದರು. ಸಿಬ್ಬಂದಿ ವಂದನಾ ಅವರು ವಾರ್ಡ್ ಸಭೆಯ ಬೇಡಿಕೆಯನ್ನು ಮಂಡಿಸಿ ವಂದಿಸಿದರು. ದೇವಿಪ್ರಸಾದ್ ನಿರ್ವಹಿಸಿದರು. ಸಿಬ್ಬಂದಿಗಳು ಸಹಕರಿಸಿದರು.












