July 30, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

ಬೆಳ್ತಂಗಡಿ : ಅನಧಿಕೃತ ಕಟ್ಟಡದಲ್ಲಿ ಯಾವುದೇ ಅನುಮತಿ ಇಲ್ಲದೆ ಕಾಮಗಾರಿ ಕೆಲಸ ಮಾಡುತ್ತಿರುವುದಕ್ಕೆ ಪಟ್ಟಣ ಪಂಚಾಯತ್ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಯಾವುದೇ ಕಾನೂನು ಪಾಲಿಸದೆ ಮತ್ತೆ ಕಾಮಗಾರಿ ಕೆಲಸ ಮಾಡುತ್ತಿರುವುದಕ್ಕೆ ಪಟ್ಟಣ ಪಂಚಾಯತ್ ‘ಡೋಲಿ’ ಕಟ್ಟಡದ ಮಾಲೀಕರಿಗೆ ಅಂತಿಮ ನೋಟಿಸ್ ಜಾರಿ ಮಾಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಳೇಕೋಟೆ ಬಳಿಯ ಸಾಯಿಮಂದಿರದ ಮುಂಭಾಗದಲ್ಲಿರುವ ‘ವಲೇರಿಯನ್ ಪಾಯಸ್’ ಎಂಬವರಿಗೆ ಸೇರಿದ ‘ಡೋಲಿ’ ಹೆಸರಿನ ಅನಧಿಕೃತ ಕಟ್ಟಡದ ಕೆಲಸವನ್ನು ಕಳೆದ ಜನವರಿ ತಿಂಗಳಿಂದ ಕಾನೂನು ಮೀರಿ ರಾಜರೋಷವಾಗಿ ಕಾಮಗಾರಿ ಮಾಡುತ್ತಿದ್ದರು. ಈ ಬಗ್ಗೆ ದೂರು ಬಂದ ಮೇರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ರೂ ಕ್ಯಾರೆ ಮಾಡದೆ ಮತ್ತೆ ಕಾಮಗಾರಿ ಕೆಲಸ ರಾಜರೋಷವಾಗಿ ಮುಂದುವರಿಸಿದ್ದರಿಂದ ಜು.29 ರಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾದ ರಾಜೇಶ್. ಕೆ ಅವರು ಅಂತಿಮ ನೋಟಿಸ್ ಜಾರಿ ಮಾಡಿದ್ದಾರೆ.

ಅನಧಿಕೃತ ‘ಡೋಲಿ’ ಕಟ್ಟಡದಲ್ಲಿ ಕಾಮಗಾರಿ ಕೆಲಸ ಮಾಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧಿಕಾರಿಗಳು 28-01-2026 ಮತ್ತು 14-05-2026 ನೋಟಿಸ್ ಜಾರಿ ಮಾಡಿದ್ದರೂ ಕೂಡ ಕಾನೂನಿಗೆ ಪಾಲಿಸದೆ ಅಕ್ರಮ ಕೆಲಸವನ್ನು ಮುಂದುವರಿಸಿದ್ದ ‘ಡೋಲಿ’ ಕಟ್ಟಡದ ಮಾಲೀಕ ವಲೇರಿಯನ್ ಪಾಯಸ್ ವಿರುದ್ಧ ಪರವಾನಿಗೆ ಪಡೆಯದೆ ನಿರ್ವಹಿಸುತ್ತಿರುವ ಕಟ್ಟಡವನ್ನು ಪುರಸಭಾ ಅಧಿನಿಯಮ 1964ರ ಪ್ರಕರಣ 108ರಂತೆ ಯಾಕೆ ಕ್ರಮ ಜರುಗಿಸಬಾರದು ಎಂಬುದಕ್ಕೆ ಈ ನೋಟೀಸು ತಲುಪಿದ 3 ದಿನಗಳೊಳಗೆ ಸೂಕ್ತ ಸಮಜಾಯಿಷಿಕೆಯನ್ನು ನೀಡಲು ತಿಳಿಸಿದೆ. ತಪ್ಪಿದ್ದಲ್ಲಿ ನಿಯಮಾನುಸಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜು.29 ರಂದು ಅಂತಿಮ ನೋಟಿಸ್ ಜಾರಿ ಮಾಡಲಾಗಿದೆ.

Related posts

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!