September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ.

ಕಕ್ಯಪದವು : ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ ದಡ್ಡಲಕಾಡು ಇಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಎಲ್. ಸಿ. ಆರ್. ಇಂಡಿಯನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧೆಯಲ್ಲಿ ಆರನೇ ತರಗತಿಯ ತಂಜಿಳ್ ಅಹಮದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿರುತ್ತಾನೆ. ಹಾಗೂ ರಿಷಿಕಾ ಮತ್ತು ದಿಶಾ. ವೈ. ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ವಿಜಯ. ಕೆ. ಇವರು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಇದೇ ರೀತಿ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya
error: Content is protected !!