July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ತೋಟಗಾರಿಕ ಇಲಾಖೆಯ ಅಧಿಕಾರಿ ಮಹಾವೀರ ಶೇಬಣ್ಣ ಅವರ ಅಧ್ಯಕ್ಷತೆಯಲ್ಲಿ ಜು.30 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ವೈದ್ಯಾಧಿಕಾರಿ ಪ್ರಶಾಂತ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿ ಪಶು ಸಂಗೋಪನ ಇಲಾಖೆಯ ಮಾಹಿತಿ ನೀಡಿದರು.

ಕಳೆದ ಸೆಪ್ಟೆಂಬರ್ ತಿಂಗಳಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಳ್ಳುತ್ತಿರುವ ಗಾಯತ್ರಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಗ್ರಾಮಸ್ಥರು ಅವರ ಸೇವಾ ಕಾರ್ಯದ ಬಗ್ಗೆ ಗ್ರಾಮಸಭೆಯಲ್ಲಿ ಶ್ಲಾಘನೆ ವ್ಯಕ್ತ ಪಡಿಸುವ ಮೂಲಕ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ನ ಶೇ.25 ಹಣಕಾಸಿನಲ್ಲಿ ಫಲಾನುಭವಿಗಳಿಗೆ ಸಹಾಯ ಧನ ಹಸ್ತಾಂತರಿಸಲಾಯಿತು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಅವರು ವರದಿ ಮಂಡಿಸಿದರು. ಸಿಬ್ಬಂದಿ ವಂದನಾ ಅವರು ವಾರ್ಡ್ ಸಭೆಯ ಬೇಡಿಕೆಯನ್ನು ಮಂಡಿಸಿ ವಂದಿಸಿದರು. ದೇವಿಪ್ರಸಾದ್ ನಿರ್ವಹಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ರೈತರ ನೂತನ ಕೋವಿ ಪರವಾನಿಗೆ ಪುನರಾರಂಭಿಸಿ: ಮೋಹನ್ ಗೌಡ ಕಲ್ಮಂಜ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya
error: Content is protected !!