September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ದೊರೆತ ಅಸ್ಥಿಪಂಜರ ಪ್ರಕರಣ; ಮೂರು ಅಸ್ಥಿಪಂಜರದ ಡಿಎನ್ಎ ಮೂಲಕ ಗುರುತು ದೃಢ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳಲ್ಲಿ ಒಟ್ಟು ಮೂರು ವ್ಯಕ್ತಿಗಳ ಕುಟುಂಬದ ಡಿಎನ್ಎ ಮೂಲಕ ಎಫ್ಎಲ್ಎಲ್ ದೃಢಪಡಿಸಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಅಧಿಕಾರಿಗಳು 17-09-2025 ಮತ್ತು 18-09-2025 ರಂದು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಏಳು ಅಸ್ಥಿಪಂಜರಗಳನ್ನು ಪತ್ತೆ ಹಚ್ಚಿ ಎಫ್ಎಲ್ಎಲ್ ಗೆ ಕಳುಹಿಸಿದ್ದರು‌‌. ಅಸ್ಥಿಪಂಜರ ಪತ್ತೆಯಾದ ಜಾಗದಲ್ಲಿ ಕೆಲವೊಂದು ಐಡಿ ಕಾರ್ಡ್ ಗಳು ಕೂಡ ಪತ್ತೆಯಾಗಿತ್ತು ಅದರ ಆಧಾರದಲ್ಲಿ ಕುಟುಂಬದವನ್ನು ಹುಡುಕಾಟ ನಡೆಸಿ ಕುಟುಂಬದವರ ಡಿಎನ್ಎ ಪರೀಕ್ಷೆಯನ್ನು ಬೆಳ್ತಂಗಡಿ ನ್ಯಾಯಾಲಯದಲ್ಲಿ ಮಾಡಿ ಎಫ್ಎಸ್ಎಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದರು ಇದರ ವರದಿಯಲ್ಲಿ ಮೂವರ ಕುಟುಂಬದ ಡಿಎನ್ಎ ಅಸ್ಥಿಪಂಜರಕ್ಕೆ ತಾಳೆಯಾಗಿರುವುದು ವರದಿಯಿಂದ ಖಚಿತವಾಗಿದೆ.

ಡಿಎನ್ಎ ಮೂಲಕ ಪತ್ತೆಯಾದವರ ವಿವರ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ.ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ(27) , ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿಯ ಕೃಷ್ಣಪ್ಪ(85) ಸೇರಿ ಮೂವರ ಅಸ್ಥಿಪಂಜರ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿರುವುದು ಡಿಎನ್ಎ ಪರೀಕ್ಷೆ ಮೂಲಕ ಖಚಿತವಾಗಿದೆ.

ನಾಪತ್ತೆಯಾಗಿದ್ದ ಮೂವರು: ಕೊಡಗು ಜಿಲ್ಲೆಯ ಯು.ಬಿ.ಅಯ್ಯಪ್ಪ(70) ಎಂಬವರು 25-06-2017 ರಲ್ಲಿ ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದ ಬಗ್ಗೆ ಕುಟ್ಟ ವೃತ್ತದ ಶ್ರೀಮಂಗಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕುಟುಂಬದವರು ದಾಖಲಿಸಿದ್ದರು. ತುಮಕೂರು ಜಿಲ್ಲೆಯ ಆದಿಶೇಷ ನಾರಾಯಣ(27) ಎಂಬಾತ ಬೆಂಗಳೂರು ಬಾರ್ ನಲ್ಲಿ ಕೆಲಸಕ್ಕೆ ಹೋಗಿದ್ದ ಬಳಿಕ 2-10-2013 ರಂದು ವಾಪಸ್ ಮನೆಗೆ ಬಂದು ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ. ಈತ ಪದೆ ಪದೆ ಮನೆಯಿಂದ ಹೋಗುತ್ತಿದ್ದ ಕಾರಣ ವಾಪಸ್ ಬರುತ್ತಾನೆಂದು ನಾಪತ್ತೆ ಪ್ರಕರಣ ಕುಟುಂಬದವರು ನೀಡಿಲ್ಲ. ಕೋಲಾರ ಜಿಲ್ಲೆಯ ಕೃಷ್ಣಪ್ಪ(85) ವಯಸ್ಸದ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದು 22-10-2024 ರಂದು ಏಕಾಏಕಿ ಮನೆಯಿಂದ ಹೊರ ಹೋದವರು ವಾಪಸ್ ಮನೆಗೆ ಬಾರದೆ ಇದ್ದ ಕಾರಣ ಕುಟುಂಬದವರು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಅಸ್ಥಿಪಂಜರ ಕುಟುಂಬಕ್ಕೆ ಪಡೆಯಲು ಅವಕಾಶ: ಡಿಎನ್ಎ ವರದಿ ಪ್ರಕಾರ ಮೂರು ಕುಟುಂಬದವರು ಎಸ್ಐಟಿ ಗೆ ಮನವಿ ಮಾಡಿದ್ರೆ ಕಟುಂಬಕ್ಕೆ ಅಸ್ಥಿಪಂಜರ ಪಡೆಯಲು ಅವಕಾಶವಿದೆ. ಎಸ್ಐಟಿ ಅಧಿಕಾರಿಗಳು ಜು.15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆಯಲ್ಲಿ ಮೂವರ ಡಿಎನ್ಎ ಮೂಲಕ ದೃಢಪಟ್ಟ ಬಗ್ಗೆ ವರದಿ ನೀಡಿದೆ.

Related posts

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಮುಂಡಾಜೆ: ವಿನೋದಾ ಫಡಕೆ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya
error: Content is protected !!