July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ಬನ್ನಿಸ್, ಕಬ್, ಬುಲ್‌ಬುಲ್, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳಿಂದ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಆಶೀರ್ವಾದ ಪಡೆದು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ಸಾರುವ ಮೂಲಕ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಪ್ರಮೀಳಾ ಪೂಜಾರಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದರು.

ಈ ಸಂದರ್ಭದಲ್ಲಿ ಸ್ಕೌಟ್-ಗೈಡ್ ಶಿಕ್ಷಕರಾದ ನೀತಾ ಕೆ. ಎಸ್., ಜಯಲಕ್ಷ್ಮಿ, ಪ್ರಮೀಳಾ ಎನ್., ಗೀತಾ ಪಿ., ರಮ್ಯ ಬಿ. ಎಸ್., ಸೌಮ್ಯ, ಅಮಿತಾ, ಕಾರುಣ್ಯ, ಸಮತಾ, ಪುಷ್ಪಲತಾ, ಮೋಹಿನಿ, ಜಯರಾಮ್ ಹಾಗೂ ಮಂಜುನಾಥ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya
error: Content is protected !!