September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಳಿಕಟ್ಟೆ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬಾರ್ಯ : ಬೆಳ್ತಂಗಡಿ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ದ. ಕ. ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಾರ್ಯ ಗ್ರಾಮದ ಸರಳಿಕಟ್ಟೆ ಶಾಲೆಯಲ್ಲಿ ನಡೆಯಿತು.

ಉದ್ಘಾಟಕರಾದ ಪ್ರಧಾನ ಸಿವಿಲ್ ನ್ಯಾಯಧೀಶರಾದ ರಾಮಲಿಂಗಪ್ಪರವರು ಪೋಕ್ಸೋ ಕಾಯ್ದೆಯ ಬಗ್ಗೆ ಮಾತನಾಡಿ ಮಕ್ಕಳು ಸುರಕ್ಷಿತ ಸ್ಪರ್ಶ ಮತ್ತು ಆಸುರಕ್ಷಿತ ಸ್ಪರ್ಶ ದ ಬಗ್ಗೆ ಗಮನದಲ್ಲಿಟ್ಟು ಅದನ್ನು ಪೋಷಕರಿಗೆ ತಿಳಿಸಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ ರವರು ಮಾತನಾಡಿ ಮಕ್ಕಳು ಮಾದಕ ವಸ್ತುಗಳಿಂದ ದೂರ ಇರುವಂತೆ ಸಲಹೆ ನೀಡಿದರು. ಇನ್ನೊರ್ವ ಅತಿಥಿಯಾದ ಪ್ರಶಾಂತ್ ಎಂ ರವರು ಕಾನೂನು ಅರಿವು ಮತ್ತು ನೆರವಿನ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾದ ಶಿವಕುಮಾರ್ ಎಸ್ ಎಂ ರವರು ಪೋಕ್ಸೋ ಮತ್ತು ಮಾನವ ಕಳ್ಳ ಸಾಗಣೆ ಇದರ ಬಗ್ಗೆ ಸವಿವಾರ ವಾಗಿ ಮಕ್ಕಳಿಗೆ ಮನದಟ್ಟು ಮಾಡಿದರು. ಅಧ್ಯಕ್ಷ ಜುಬೈದರವರು ಈ ಕಾರ್ಯಕ್ರಮವನ್ನು ನಡೆಸಿದ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಧನ್ಯವಾದವನ್ನು ತಿಳಿಸಿದರು. ಶಿಕ್ಷಕಿ ಅಂಬಿಕಾ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಶ್ರೀಮತಿ ಅನುರಾಧ ಪ್ರಾಸ್ತವಿಕ ಮಾತನಾಡಿ, ಶಿಕ್ಷಕಿ ಶಶಿರೇಖಾ ಧನ್ಯವಾದ ನೀಡಿ, ಶಿಕ್ಷಕ ಸುನಿಲ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಮೊದಲಿಗೆ ಸಂವಿಧಾನದ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಗ್ರಾಮಸ್ಥರು ಹಾಜರಿದ್ದರು

Related posts

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್–ಸುಧಾಮ ಗಾರ್ಡನ್ ಶುಭಾರಂಭ: ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಚಾಲನೆ

Suddi Udaya
error: Content is protected !!