24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

6300 ಕಿ.ಮೀ. ಕಾರು ಚಾಲನೆ ಮಾಡಿ ಚಾರ್‌ಧಾಮ ಯಾತ್ರೆ ಪೂರ್ಣಗೊಳಿಸಿದ ಬೆಳ್ತಂಗಡಿಯ ರತೀಶ್–ಪ್ರೀತಿ ರಾವ್ ಉದ್ಯಮಿ ದಂಪತಿ

ಬೆಳ್ತಂಗಡಿ: ಭಕ್ತಿ, ಸಾಹಸ ಹಾಗೂ ಪ್ರಕೃತಿ ಪ್ರೇಮವನ್ನು ಒಂದೇ ಪ್ರವಾಸದಲ್ಲಿ ಬೆಸೆದು ಬೆಳ್ತಂಗಡಿಯ ಉದ್ಯಮಿ ರತೀಶ್ ರಾವ್ ಹಾಗೂ ಅವರ ಪತ್ನಿ ಪ್ರೀತಿ ರಾವ್ ದಂಪತಿ ಸುಮಾರು 15 ದಿನಗಳ ಅವಧಿಯಲ್ಲಿ 6,300 ಕಿಲೋಮೀಟರ್‌ಗಳನ್ನು ಸ್ವತಃ ಕಾರು ಚಾಲನೆ ಮಾಡಿಕೊಂಡು ಉತ್ತರಾಖಂಡದ ಪ್ರಸಿದ್ಧ ಚಾರ್‌ಧಾಮ ಸೇರಿದಂತೆ ಹಲವು ಪವಿತ್ರ ಕ್ಷೇತ್ರಗಳಿಗೆ ಯಶಸ್ವಿಯಾಗಿ ಯಾತ್ರೆ ಕೈಗೊಂಡಿದ್ದಾರೆ.

ಯಾತ್ರೆಯ ವೇಳೆ ದಂಪತಿ ಯಮುನೋತ್ರಿ,ಗಂಗೋತ್ರಿ, ಕೇದಾರನಾಥ್ ಹಾಗೂ ಬದರಿನಾಥ್ ಚಾರ್‌ಧಾಮ ಕ್ಷೇತ್ರಗಳ ದರ್ಶನ ಪಡೆದರು. ಅಲ್ಲದೆ, ಪಂಚಪ್ರಯಾಗ, ಗುಪ್ತಕಾಶಿ, ಉತ್ತರಕಾಶಿ ಹಾಗೂ ಶಿವ-ವಿಷ್ಣುಗಳ ಐಕ್ಯಕ್ಕೆ ಸಾಕ್ಷಿಯಾಗಿರುವ ಪವಿತ್ರ ತ್ರಿಯುಗಿನಾರಾಯಣ ದೇವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕಷ್ಟಕರ ಪರ್ವತ ಮಾರ್ಗಗಳು, ತಿರುವು-ಮುರುವುಗಳಿಂದ ಕೂಡಿದ ಹಿಮಾಲಯದ ರಸ್ತೆಗಳಲ್ಲಿ ಯಾವುದೇ ಚಾಲಕರ ನೆರವಿಲ್ಲದೆ ಸ್ವತಃ ಕಾರು ಚಾಲನೆ ಮಾಡಿಕೊಂಡು ಯಾತ್ರೆಯನ್ನು ಪೂರ್ಣಗೊಳಿಸಿರುವುದು ವಿಶೇಷವಾಗಿದೆ.

ಸಾಹಸಮಯ ಪ್ರವಾಸಗಳು ಹಾಗೂ ಟ್ರೆಕ್ಕಿಂಗ್‌ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ರತೀಶ್ ರಾವ್ ಮತ್ತು ಪ್ರೀತಿ ರಾವ್ ದಂಪತಿ ಈ ಹಿಂದೆ ಕೂಡ ದೇಶದ ವಿವಿಧ ಭಾಗಗಳಿಗೆ ಸ್ವಯಂ ಚಾಲನೆಯ ಮೂಲಕ ಪ್ರವಾಸ ಕೈಗೊಂಡಿದ್ದು, ಪ್ರಕೃತಿಯ ಸೊಬಗು ಮತ್ತು ಆಧ್ಯಾತ್ಮಿಕ ಅನುಭವಗಳನ್ನು ಆಸ್ವಾದಿಸುವುದನ್ನು ತಮ್ಮ ಜೀವನಶೈಲಿಯ ಭಾಗವಾಗಿಸಿಕೊಂಡಿದ್ದಾರೆ.

ಭಕ್ತಿ, ಧೈರ್ಯ ಮತ್ತು ಸಾಹಸ ಮನೋಭಾವವನ್ನು ಪ್ರತಿಬಿಂಬಿಸುವ ಈ ಚಾರ್‌ಧಾಮ ಯಾತ್ರೆ ಬೆಳ್ತಂಗಡಿ ಭಾಗದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya
error: Content is protected !!