24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರಕ್ಕೆ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026” ಗೌರವ

ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) (ACCE(I)) ವತಿಯಿಂದ 2025–26ನೇ ಸಾಲಿನ ಕೇಂದ್ರದ ಅತ್ಯುತ್ತಮ ಚಟುವಟಿಕೆಗಳು, ತಾಂತ್ರಿಕ ಕಾರ್ಯಕ್ರಮಗಳು ಹಾಗೂ ವೃತ್ತಿಪರ ಸೇವೆಗಳನ್ನು ಪರಿಗಣಿಸಿ, ACCE(I) ಬೆಳ್ತಂಗಡಿ ಕೇಂದ್ರಕ್ಕೆ ಪ್ರತಿಷ್ಠಿತ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026 (Centre Activities)” ಪ್ರದಾನ ಮಾಡಲಾಗಿದೆ.

ಈ ಪ್ರಶಸ್ತಿಯನ್ನು ಕೊಯಂಬತ್ತೂರಿನಲ್ಲಿ ನಡೆದ ACCE(I)ಯ 41ನೇ ವಾರ್ಷಿಕ ಮಹಾಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ರಾಜೇಂದ್ರ ಕಲ್ಬಾವಿ ಹಾಗೂ ಗಣ್ಯರ ಸಮ್ಮುಖದಲ್ಲಿ ಬೆಳ್ತಂಗಡಿ ಕೇಂದ್ರದ ಪ್ರತಿನಿಧಿಗಳಿಗೆ ಪ್ರದಾನಿಸಲಾಯಿತು.
2025–26ನೇ ಸಾಲಿನಲ್ಲಿ ಬೆಳ್ತಂಗಡಿ ಕೇಂದ್ರವು ತಾಂತ್ರಿಕ ಉಪನ್ಯಾಸಗಳು, ಕಾರ್ಯಾಗಾರಗಳು, ಇಂಜಿನಿಯರ್ಸ್ ಡೇ ಆಚರಣೆ, ಜಾಗೃತಿ ಕಾರ್ಯಕ್ರಮಗಳು, ಸಾಮಾಜಿಕ ಸೇವಾ ಚಟುವಟಿಕೆಗಳು ಹಾಗೂ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಈ ಗೌರವವು ಕೇಂದ್ರದ ಎಲ್ಲಾ ಸದಸ್ಯರು, ಪದಾಧಿಕಾರಿಗಳು ಹಾಗೂ ಸಹಕರಿಸಿದ ಪ್ರಾಯೋಜಕರ ತಂಡದ ಸಮರ್ಪಿತ ಸೇವೆಗೆ ಸಂದ ಮಾನ್ಯತೆಯಾಗಿದೆ ಎಂದು ಕೇಂದ್ರದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya
error: Content is protected !!