September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ.

ಕಕ್ಯಪದವು : ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ ದಡ್ಡಲಕಾಡು ಇಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಎಲ್. ಸಿ. ಆರ್. ಇಂಡಿಯನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧೆಯಲ್ಲಿ ಆರನೇ ತರಗತಿಯ ತಂಜಿಳ್ ಅಹಮದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿರುತ್ತಾನೆ. ಹಾಗೂ ರಿಷಿಕಾ ಮತ್ತು ದಿಶಾ. ವೈ. ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ವಿಜಯ. ಕೆ. ಇವರು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಇದೇ ರೀತಿ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!