28 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ

ಉಜಿರೆ: ‘ ಭಾರತೀಯ ಪರಂಪರೆಯಲ್ಲಿ ಪ್ರಾಚೀನ ಕಾಲದಿಂದಲೂ ಗುರುವಿಗೆ ವಿಶೇಷ ಸ್ಥಾನ ನೀಡಲಾಗಿದೆ. ತಂದೆ ತಾಯಿಯನ್ನು ಬಿಟ್ಟರೆ ಗುರುವಿಗೆ ಉನ್ನತ ಸ್ಥಾನ ನೀಡಲಾಗಿದೆ. ಹಿಂದೆ ಗುರುಶಿಷ್ಯ ಪರಂಪರೆಯ ಅವಿಚ್ಛಿನ್ನ ಪದ್ಧತಿ ಇತ್ತು. ಈಗ ಅದು ಇಲ್ಲದಿದ್ದರೂ ವಿದ್ಯಾರ್ಥಿಗಳು ಗುರುಗಳನ್ನು ಸ್ಮರಿಸುವ ಕೆಲಸ ಮಾಡಬೇಕು.

ವೇದವ್ಯಾಸರನ್ನು ಭಾರತದ ಪ್ರಥಮ ಗುರುವೆಂದು ಗುರುಪೂರ್ಣಿಮಾ ದಿನದಂದು ಅವರನ್ನು ಸ್ಮರಿಸುವ ಕಾರ್ಯ ಸ್ತುತ್ಯರ್ಹ ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಂ ಆಯೋಜಿಸಿದ ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ವೇದವ್ಯಾಸರ ಬಗ್ಗೆ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಶುಭ ಹಾರೈಸಿದರು. ನಂತರ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿವಿಧ ತರಗತಿಗಳಲ್ಲಿ ಗುರುಪೂರ್ಣಿಮಾದ ಮಹತ್ವ ಹಾಗೂ ವೇದವ್ಯಾಸರ ಬಗ್ಗೆ ಮಾಹಿತಿಗಳನ್ನು ನೀಡಿದರು. ಹಾಗೆಯೇ ಎಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರದೊಂದಿಗೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ್ ಐತಾಳ್ ಹಾಗೂ ಸಂಸ್ಕೃತ ಸಂಘದ ಅಧ್ಯಕ್ಷೆ ಅಕ್ಷರ , ಪ್ರಧಾನ ಕಾರ್ಯದರ್ಶಿ ಸ್ಪೂರ್ತಿ , ಸಹ ಕಾರ್ಯದರ್ಶಿ ಟಿ.ಪಿ ಹಿತಾ, ಸಂಸ್ಕೃತ ಅಂತರಾಧ್ಯನ ವೃತ್ತಂ ಇದರ ಸಂಯೋಜಕರಾದ ಕವನಾ ಸಿ ಜೈನ್ ಹಾಗೂ ಭೂಮಿಕಾ ಎಸ್.ಕೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅಹಲ್ಯಾ ಬೆಂಡೆ ನಿರೂಪಿಸಿ ವಂದಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಕ್ರೀಡಾಕೂಟ: ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ತಂಗಡಿಗೆ ಪ್ರಶಸ್ತಿ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya
error: Content is protected !!