September 15, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

ಬೆಳ್ತಂಗಡಿ: ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಜು.31ರಂದು ಮುಂಜಾನೆ ನಡೆದಿದೆ.

ಸಯ್ಯದ್ ಅನ್ವರ್ ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಅವರ ಬಾಡಿಗೆ ಮನೆಯಲ್ಲಿ ಪತ್ನಿ ಮಗುವಿನೊಂದಿಗೆ ವಾಸವಾಗಿದ್ದು ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮೀನಿನ ಟೆಂಪೊದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನ್ವರ್ ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದು ಒಂದೆರಡು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದರು. ಗುರುವಾರ ಮತ್ತೆ ಪತಿ- ಪತ್ನಿ ನಡುವೆ ಜಗಳವಾಗಿದ್ದು ಪತ್ನಿ ತನ್ನ
ಎರಡು ವರ್ಷದ ಪುತ್ರನೊಂದಿಗೆ ತವರು ಮನೆಗೆ ತೆರಳಿದ್ದರು.

ಈ ಹಿನ್ನೆಲೆಯಲ್ಲಿ ತನ್ನಕ್ಕನಿಗೆ ವಿಡಿಯೊ ಕರೆ ಮಾಡಿ ಪತ್ನಿ ಮನೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆನ್ನಲಾಗಿದೆ. ಆತಂಕಕ್ಕೊಳಗಾದ ಮನೆಯವರು ಬಾಡಿಗೆ ಮನೆ ಬಳಿ ಬಂದಾಗ ಆಗಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಕರಾಟೆ ಪಂದ್ಯಾಟ: ಎಕ್ಸೆಲ್‌ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya
error: Content is protected !!