September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

ಮಚ್ಚಿನ : ಇಲ್ಲಿಯ ಪುರುಷರ ಮಜಲು ಕಲಾಯಿ ರಸ್ತೆಯು ತೀರಾ ಹದಗೆಟಿದ್ದು ನಡೆದಾಡಲು ಸಾಧ್ಯವಾಗದಂತೆಯಾಗಿದೆ. ನಿತ್ಯ ಶಾಲೆಗೆ ತೆರಳುವ ಈ ಮಕ್ಕಳು ಕೆಸರಿನಲ್ಲಿ ಹೊರಳಾಡಿಕೊಂಡು ಶಾಲೆಗೆ ತೆರಳುವ ಸ್ಥಿತಿ ನಿರ್ಮಾಣಗೊಂಡಿದೆ.

ಈ ರಸ್ತೆಗೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿಯನ್ನು ನೀಡಿದರು ಯಾವುದೇ ಸ್ಪಂದನೆ ನೀಡದಿರುವುದು ಸ್ಥಳೀಯ ಜನರಿಗೆ ಅಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಎಸ್ ಟಿ ಹಾಗೂ ಇತರ ವರ್ಗದ ಸುಮಾರು ಮನೆಗಳಿದ್ದರು ಒಂದು ಕಿಲೋ ಮೀಟರ್ ರಸ್ತೆ ಮಾತ್ರ ದುರಸ್ತೆಯ ಯೋಗ್ಯವೆ ಇಲ್ಲ ಸ್ಥಳೀಯರಿಗೆ ಆರೋಗ್ಯದ ಸಮಸ್ಯೆ ಬಂದಾಗ ಹೆಗಲ ಮೇಲೆ ಹೊತ್ತುಕೊಂಡು ಆಸ್ಪತ್ರೆಗೆ ತೆರಳುವ ಸ್ಥಿತಿ ನಿರ್ಮಾಣಗೊಂಡಿದೆ. ಸ್ಥಳೀಯರು ಒಟ್ಟು ಸೇರಿ ಸುಮಾರು ಐವತ್ತು ಸಾವಿರದವರೆಗೂ ಮೋರಿ ಕೆಲಸಗಳನ್ನು ತಾವೆ ಮಾಡಿಸಿದರು. ಆದರೆ ಜನಪ್ರತಿನಿಧಿಗಳ ಭರವಸೆ ಒಂದೇ ನಮಗೆ ವರದಾನವಾಗಿದೆ ಎನ್ನುತ್ತಾರೆ. ಸ್ಥಳೀಯರು ಜನಪ್ರತಿನಿಧಿಗಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ಮಕ್ಕಳ ಮೇಲೆ ಕರುಣೆ ತೋರಿಯಾದರೂ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡುವಂತೆ ಸ್ಥಳೀಯರು ಒತ್ತಾಯಸಿದ್ದಾರೆ.
✍️ ಹರ್ಷ ಬಳ್ಳಮಂಜ

Related posts

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!