July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಆಟಿಡೊಂಜಿ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲೆ ತುಳುನಾಡಿನ ವೈಭವವನ್ನು ನೆನಪಿಸುವಂತೆ ಅಲಂಕರಿಸಲಾಗಿತ್ತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ವಾಣಿ ಕಾಲೇಜಿನ ನಿವೃತ್ತ ಪ್ರಾಚಾರ್ಯ ಯದುಪತಿ ಗೌಡ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿ ತುಳುನಾಡಿನ ನಾಡು ನುಡಿ ಸಂಸ್ಕೃತಿ ಆಚಾರ ವಿಚಾರ ಅದರ ಹಿಂದಿರುವ ವೈಜ್ಞಾನಿಕ ತತ್ವಗಳನ್ನು ಆಧಾರ ಸಹಿತ, ಹಲವಾರು ಗಾದೆ ಒಗಟುಗಳ ಮುಖಾಂತರ ವಿವರಿಸಿದರು. ಹಲವಾರು ತುಳು ನಿದರ್ಶನಗಳನ್ನು ನೀಡಿ ತುಳು ತುಳುನಾಡಿನ ಜನ ಜೀವನವನ್ನು ವಿವರಿಸಿದರು. ಶಾಲೆಯಲ್ಲಿ ಔಷಧೀಯ ಸಸ್ಯಗಳ ಪ್ರದರ್ಶನ, ಆಟಿ ತಿಂಗಳಲ್ಲಿ ಆಡುವಂತಹ ಆಟಗಳು, ಔಷಧೀಯ ಸಸ್ಯಗಳ ಪ್ರದರ್ಶನ, ಆಹಾರ ಕಾಳಜಿಯ ಕುರಿತಾದ ಪ್ರದರ್ಶನ , ಆಟಿ ತಿಂಗಳ ವೈಜ್ಞಾನಿಕ ಮಹತ್ವದ ವಿಚಾರ ಸಂಕಿರಣ, ತುಳು ಭಾಷೆಗಳ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಬಿತ್ತಿ ಪತ್ರಿಕೆ ಸಂಘವು ಆಟಿಗೆ ಸಂಬಂಧಿಸಿದಂತಹ ಬಿತ್ತಿ ಪತ್ರಿಕೆಯ ತಯಾರಿಯ ಸ್ಪರ್ಧೆಯನ್ನು ಏರ್ಪಡಿಸಿದ್ದು, ಶಾಲಾ ಓದಿನ ಸಂಘ ಗಾದೆ ಮಾತುಗಳ ಸ್ಪರ್ಧೆ ಏರ್ಪಡಿಸಿದ್ದು ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ತುಳು ಗಾದೆ ಒಗಟು ನೃತ್ಯ, ಹಾಡು, ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಎಲ್ಲರನ್ನೂ ಮನರಂಜಿಸಿದರು. ಶಾಲಾ ವಿದ್ಯಾರ್ಥಿಗಳಾದ ಅನ್ವಿತ್ , ಅಮೀತ್ ಅರ್ಚನಾ ಹಾಗೂ ಕೃತಿಕಾ ಅವರ ನಿರೂಪಣೆಯೊಂದಿಗೆ, ಶಾಲಾ ವಿದ್ಯಾರ್ಥಿ ಭವ್ಯೇಶ್ ಎಸ್.ಗೌಡ , ಸ್ವಾಗತಿಸಿ, ಅಶ್ವಿತ ಧನ್ಯವಾದವಿತ್ತರು.ಶಾಲೆಯಲ್ಲಿ ವಿದ್ಯಾರ್ಥಿಗಳು ಆಟಿ ತಿಂಗಳ ತಿಂಡಿ ತಿನಿಸುಗಳನ್ನು ತಂದು ಸಂಭ್ರಮಿಸಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Related posts

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!