ಉಜಿರೆ: ಉಜಿರೆ ಪೇಟೆಯಿಂದ ಬೆಳ್ತಂಗಡಿ ಬರುವ ರಸ್ತೆಯಲ್ಲಿ ಪೇಟೆ ಬಳಿಯ ಭಾರತ್ಐರನ್ ವರ್ಕ್ಸ್ ಮುಂಭಾಗದ ರಸ್ತೆಯಲ್ಲಿ ಚರಂಡಿ ನೀರು ರಸ್ತೆಯಲ್ಲೇ ಹರಿದು, ವಾಹನ ಸವಾರರು ಪರದಾಡುವಂತಾಯಿತು. ರಸ್ತೆ ಬದಿಯ ಅಂಗಡಿಗಳಿಗೂ ನೀರು ನುಗ್ಗಿದ ದೃಶ್ಯ ಕಂಡು ಬಂದಿದೆ.
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಬಳಿ, ಚರಂಡಿಯಲ್ಲಿ ಹರಿಯಬೇಕಿದ್ದ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಮಳೆ ನೀರಿನಿಂದಾವೃತವಾಗಿ ರಸ್ತೆ ಕಾಣದೆ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ, ರಸ್ತೆ ಬದಿಯ ಅಂಗಡಿಗಳಿಗೂ ನೀರು ನುಗ್ಗಿ ವರ್ತಕರು ಸಂಕಷ್ಟ ಎದುರಿಸುವಂತಾಯಿತು.













