25.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ : ವರಮಹಾಲಕ್ಷ್ಮೀ ಪೂಜೆ, ಧಾರ್ಮಿಕ ಸಭಾ ಆಮಂತ್ರಣ ಪತ್ರಿಕೆ ಬಿಡುಗಡೆ

ನಾಳ:. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ, ನ್ಯಾಯತರ್ಪು, ಕಳಿಯ-ಪ್ರಗತಿಬಂಧು- ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
ಆ.28 ರಂದು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರು ಪ್ರಾರ್ಥನೆಯೊಂದಿಗೆ ಬಿಡುಗಡೆ ಮಾಡಿದರು.
ವೇ.ಮೂ. ರಾಘವೇಂದ್ರ ಆಸ್ರಣ್ಣ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.


ಪೂಜಾ ಸಮಿತಿ ಅಧ್ಯಕ್ಷೆ ಸಂಧ್ಯಾ ಸುರೇಶ್, ಉಪಾಧ್ಯಕ್ಷೆ ವಿನೋದ, ಕಾರ್ಯದರ್ಶಿ ರಾಜೀವಿ ಪದ್ಮನಾಭ, ಜತೆ ಕಾರ್ಯದರ್ಶಿ ಹಾಗೂ ನ್ಯಾಯರ್ತಪು ಪ್ರತಿನಿಧಿ ಸುಮಿತ್ರಾ ಸುರೇಶ್ ಶೆಟ್ಟಿ, ನಿಕಟ ಪೂರ್ವಾಧ್ಯಕ್ಷರು ಪುಷ್ಪಾ ಉದಯ, ಕೋಶಾಧಿಕಾರಿ ಅನುಪಮಾ ಸತೀಶ್, ಗ್ರಾಮಾಭಿವೃದ್ದಿ ಯೋಜನೆ ಮೇಲ್ವಿಚಾರಕರಾದ ರವಿ ಜಿ., ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಎಂ., ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ದೇವಸ್ಥಾನದ ಪ್ರಬಂಧಕ ಗೀರೀಶ್ ಶೆಟ್ಟಿಜಿ.ಎಸ್, ಕಳಿಯ, ನ್ಯಾಯತರ್ಪು ಜನ ಜಾಗೃತಿ ಸಮಿತಿ ಅಧ್ಯಕ್ಷ ವಿಜಯ ಕುಮಾರ್ ಕೆ., ನ್ಯಾಯತರ್ಪು ಒಕ್ಕೂಟದ ಅಧ್ಯಕ್ಷ ಸಿದ್ದಪ್ಪ ಗೌಡ ಹೆಚ್.,ಕಳಿಯ ಪ್ರತಿನಿಧಿ ಸೌಮ್ಯ ಶೆಟ್ಟಿ, ಶ್ರೀದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ.ಆಳ್ವ, ಮಾಜಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!