September 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದ ಕುಕ್ಕವುನಿಂದ ಕೂಡಬೆಟ್ಟು ಸದಾಶಿವ ದೇಗುಲ ಕಡೆಗೆ ಸಂಪರ್ಕ ಕಲ್ಪಿಸುವ ಪಾದೆ ಸೇತುವೆ ಕಿರು ಸೇತುವೆ ಸಮೀಪ ಭಾರಿ ಮಳೆಗೆ ರಸ್ತೆ ಬಿರುಕು ಬಿಟ್ಟಿದ್ದು ಈ ಪ್ರದೇಶದ ವಾಹನ ಸಂಚಾರ ಸ್ಥಗಿತಗೊಂಡಿದೆ.

ಆ. 2 ರ ತಡ ರಾತ್ರಿಯ ಮಳೆಯ ಅಬ್ಬರಕ್ಕೆ ಕುಸಿತಗೊಂಡ ಘಟನೆ. ನಡೆದಿದೆ. ಈ ಹಿಂದೆ ಪ್ರವಾಹದಿಂದ ಹಾನಿಯಾಗಿದ್ದ ಈ ಪ್ರದೇಶದಲ್ಲಿ ನೂತನ ಸೇತುವೆ ನಿರ್ಮಾಣ ಗೊಂಡ ಒಂದೇ ವರ್ಷದಲ್ಲೀ ಸೇತುವೆ ಕೆಳಭಾಗದ ತಡೆಗೋಡೆ ಕೊರೆಯಲಾರಂಭಿಸಿತ್ತು ಈ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸೇತುವೆ ಕುಸಿಯಲು ಕಾರಣ ಎನ್ನುತ್ತಾರೆ ಸ್ಥಳೀಯರು.

ಈ ಭಾಗದಲ್ಲಿ ಸುಮಾರು 50 ಮನೆಗಳಿದ್ದು ಸೇತುವೆ ಕುಸಿತ ಹಿನ್ನಲೆ ವಾಹನ ಸಂಚಾರ ಸ್ಥಗಿತಗೊಂಡಿದ್ದುಸಂಪರ್ಕ ಅಸ್ತವ್ಯಸ್ತಗೊಂಡಿದೆ. ಸೇತುವೆ ಮೇಲೆ ನಡೆದುಕೊಂಡು ಹೋಗಲು ಸಾಧ್ಯವಾಗಿದ್ದು, ಈ ಭಾಗಕ್ಕೆ ಯಾವುದೇ ಪರ್ಯಾಯ ರಸ್ತೆ ಇಲ್ಲ, ಮಳೆಯ ಹೆಚ್ಚಿದಲ್ಲಿ ನೀರಿನ ರಭಸಕ್ಕೆ ಸೇತುವೆ ಪೂರ್ತಿ ಕುಸಿದಲ್ಲಿ ಈ ಪ್ರದೇಶ ಸಂಪರ್ಕ ಕಳೆದುಕೊಳ್ಳಲಿದೆ. ಕಳೆದ ಮೂರು ವರ್ಷದ ಹಿಂದೆ ನಿರ್ಮಾಣಗೊಂಡ ಈ ಸೇತುವೆಯ ದುಸ್ಥಿತಿಗೆ ಜನರು ಬೇಸರಿಸಿದ್ದಾರೆ.

ಸದ್ರಿ ಸ್ಥಳಕ್ಕೆ ಪಿಡಿಓ ಮೋಹನ್ ಬಂಗೇರ, ಗ್ರಾಮ ಆಡಳಿತಾಧಿಕಾರಿ ಸಂತೋಷ್ ರವರು ಭೇಟಿ ನೀಡಿ ಪರಿಶೀಲಿಸಿದ್ದು ಸಂಚಾರವನ್ನು ನಿರ್ಬಂಧಿಸಲಾಗಿದೆ.

Related posts

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya
error: Content is protected !!