August 2, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದ ಕುಕ್ಕವುನಿಂದ ಕೂಡಬೆಟ್ಟು ಸದಾಶಿವ ದೇಗುಲ ಕಡೆಗೆ ಸಂಪರ್ಕ ಕಲ್ಪಿಸುವ ಪಾದೆ ಸೇತುವೆ ಕಿರು ಸೇತುವೆ ಸಮೀಪ ಭಾರಿ ಮಳೆಗೆ ರಸ್ತೆ ಬಿರುಕು ಬಿಟ್ಟಿದ್ದು ಈ ಪ್ರದೇಶದ ವಾಹನ ಸಂಚಾರ ಸ್ಥಗಿತಗೊಂಡಿದೆ.

ಆ. 2 ರ ತಡ ರಾತ್ರಿಯ ಮಳೆಯ ಅಬ್ಬರಕ್ಕೆ ಕುಸಿತಗೊಂಡ ಘಟನೆ. ನಡೆದಿದೆ. ಈ ಹಿಂದೆ ಪ್ರವಾಹದಿಂದ ಹಾನಿಯಾಗಿದ್ದ ಈ ಪ್ರದೇಶದಲ್ಲಿ ನೂತನ ಸೇತುವೆ ನಿರ್ಮಾಣ ಗೊಂಡ ಒಂದೇ ವರ್ಷದಲ್ಲೀ ಸೇತುವೆ ಕೆಳಭಾಗದ ತಡೆಗೋಡೆ ಕೊರೆಯಲಾರಂಭಿಸಿತ್ತು ಈ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸೇತುವೆ ಕುಸಿಯಲು ಕಾರಣ ಎನ್ನುತ್ತಾರೆ ಸ್ಥಳೀಯರು.

ಈ ಭಾಗದಲ್ಲಿ ಸುಮಾರು 50 ಮನೆಗಳಿದ್ದು ಸೇತುವೆ ಕುಸಿತ ಹಿನ್ನಲೆ ವಾಹನ ಸಂಚಾರ ಸ್ಥಗಿತಗೊಂಡಿದ್ದುಸಂಪರ್ಕ ಅಸ್ತವ್ಯಸ್ತಗೊಂಡಿದೆ. ಸೇತುವೆ ಮೇಲೆ ನಡೆದುಕೊಂಡು ಹೋಗಲು ಸಾಧ್ಯವಾಗಿದ್ದು, ಈ ಭಾಗಕ್ಕೆ ಯಾವುದೇ ಪರ್ಯಾಯ ರಸ್ತೆ ಇಲ್ಲ, ಮಳೆಯ ಹೆಚ್ಚಿದಲ್ಲಿ ನೀರಿನ ರಭಸಕ್ಕೆ ಸೇತುವೆ ಪೂರ್ತಿ ಕುಸಿದಲ್ಲಿ ಈ ಪ್ರದೇಶ ಸಂಪರ್ಕ ಕಳೆದುಕೊಳ್ಳಲಿದೆ. ಕಳೆದ ಮೂರು ವರ್ಷದ ಹಿಂದೆ ನಿರ್ಮಾಣಗೊಂಡ ಈ ಸೇತುವೆಯ ದುಸ್ಥಿತಿಗೆ ಜನರು ಬೇಸರಿಸಿದ್ದಾರೆ.

ಸದ್ರಿ ಸ್ಥಳಕ್ಕೆ ಪಿಡಿಓ ಮೋಹನ್ ಬಂಗೇರ, ಗ್ರಾಮ ಆಡಳಿತಾಧಿಕಾರಿ ಸಂತೋಷ್ ರವರು ಭೇಟಿ ನೀಡಿ ಪರಿಶೀಲಿಸಿದ್ದು ಸಂಚಾರವನ್ನು ನಿರ್ಬಂಧಿಸಲಾಗಿದೆ.

Related posts

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!