August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

ಬೆಳ್ತಂಗಡಿ: ನಮ್ಮೊಳಗಿನ ಅದ್ಭುತ ಶಕ್ತಿಗಳನ್ನು ಗುರುತಿಸಿ ಪ್ರಕಟಿಕರಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಪಿಯು ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳಿ, ಭಾವನೆಗಿಂತ ಶಿಸ್ತಿಗೆ ಪ್ರಾಮುಖ್ಯತೆಯನ್ನು ನೀಡಿ ಎಂದು ಹಿರಿಯ ವಕೀಲರು, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಅವರು ಆ.1ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ವಿದ್ವತ್ ಪಿಯು ಕಾಲೇಜು ವತಿಯಿಂದ ನಡೆದ ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾಸಂಸ್ಥೆಗಳು ವ್ಯವಹಾರ ಕ್ಷೇತ್ರವಾಗದೆ ಉತ್ತಮ ಶಿಕ್ಷಣವನ್ನು ನೀಡಬೇಕು. ಬದುಕಿನ ಅಮೂಲ್ಯ ಎರಡು ವರ್ಷಗಳನ್ನು ಹಾಳು ಮಾಡದೆ ಕೌನ್ಸಿಲರ್ ಗಳು ನೀಡುವ ಮಾರ್ಗದರ್ಶನವನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

ವೇದಿಕೆಯಲ್ಲಿ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ್ ಇ ಮಂಡಗಳಲೆ, ಕಾರ್ಯದರ್ಶಿ ಪ್ರಜ್ವಲ್ ರೈ, ಖಜಾಂಚಿ ಕಾಶಿನಾಥ ಎಂ.ಕೆ., ಪ್ರಾಂಶುಪಾಲರಾದ ಬಾಲಕೃಷ್ಣ ನಾಯಕ್, ಆಡಳಿತಾಧಿಕಾರಿ, ಅಶೋಕ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. *ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ:* ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಚಿನ್ಮಯ್ ಜಿಕೆ, ಸಂಪತ್ ಕುಮಾರ್, ತನುಶ್ರೀ, ಪ್ರತೀಕ್ ವಿಎಸ್, ಅಜಿತ್ ಎಚ್.ಸಿ, ಮನೀಶ್ ಡಿ, ರಾಹುಲ್ ಸ್ವಾಮಿ, ರಿತೇಶ್, ಪ್ರಥಮ್ ಆರ್., ರಾಹುಲ್ ಜಿಎಸ್, ರಿಶಾಂತ್ ವೈಪಿ, ಸೃಷ್ಟಿ ಎಸ್, ನೇಹಾ ಭಟ್, ಧ್ಯಾನ್ ಎಸ್. ಹಾಗೂ ಅವರ ಪೋಷಕರುರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಾದ ಸನ್ನಿಧಿ ಎ.ಎಚ್. ಸ್ವಾಗತಿಸಿದರು. ಕಾಶ್ವಿ ದಿನೇಶ್ ವಂದಿಸಿದರು.

Related posts

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya
error: Content is protected !!