August 2, 2026
ಕರಾವಳಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ: ನಾಳೆ(ಆ.3) ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 3ರಂದು ತುರ್ತು ಸಭೆ ನಡೆಯಲಿದೆ.

ಆಗಸ್ಟ್ 3, 2026ರಂದು ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು.

ಈ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಟಾಸ್ಕ್ ಫೋರ್ಸ್ ತಂಡಗಳ ಮುಖ್ಯಸ್ಥರು, ರೋವರ್ಸ್ ಮತ್ತು ರೇಂಜರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.

ಅಲ್ಲದೆ, ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪ್ರತಿನಿಧಿಗಳಿಗೂ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದ್ದು, ಭಾರೀ ಮಳೆಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಮನ್ವಯ ಮತ್ತು ತ್ವರಿತ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಅವರ ಕಚೇರಿ ಶ್ರಮಿಕ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಬಿಕೆ ಹರಿಪ್ರಸಾದ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನಮಾನ ನೀಡುವಂತೆ ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರು,ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಒತ್ತಾಯ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!