September 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದ ಕುಕ್ಕವುನಿಂದ ಕೂಡಬೆಟ್ಟು ಸದಾಶಿವ ದೇಗುಲ ಕಡೆಗೆ ಸಂಪರ್ಕ ಕಲ್ಪಿಸುವ ಪಾದೆ ಸೇತುವೆ ಕಿರು ಸೇತುವೆ ಸಮೀಪ ಭಾರಿ ಮಳೆಗೆ ರಸ್ತೆ ಬಿರುಕು ಬಿಟ್ಟಿದ್ದು ಈ ಪ್ರದೇಶದ ವಾಹನ ಸಂಚಾರ ಸ್ಥಗಿತಗೊಂಡಿದೆ.

ಆ. 2 ರ ತಡ ರಾತ್ರಿಯ ಮಳೆಯ ಅಬ್ಬರಕ್ಕೆ ಕುಸಿತಗೊಂಡ ಘಟನೆ. ನಡೆದಿದೆ. ಈ ಹಿಂದೆ ಪ್ರವಾಹದಿಂದ ಹಾನಿಯಾಗಿದ್ದ ಈ ಪ್ರದೇಶದಲ್ಲಿ ನೂತನ ಸೇತುವೆ ನಿರ್ಮಾಣ ಗೊಂಡ ಒಂದೇ ವರ್ಷದಲ್ಲೀ ಸೇತುವೆ ಕೆಳಭಾಗದ ತಡೆಗೋಡೆ ಕೊರೆಯಲಾರಂಭಿಸಿತ್ತು ಈ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸೇತುವೆ ಕುಸಿಯಲು ಕಾರಣ ಎನ್ನುತ್ತಾರೆ ಸ್ಥಳೀಯರು.

ಈ ಭಾಗದಲ್ಲಿ ಸುಮಾರು 50 ಮನೆಗಳಿದ್ದು ಸೇತುವೆ ಕುಸಿತ ಹಿನ್ನಲೆ ವಾಹನ ಸಂಚಾರ ಸ್ಥಗಿತಗೊಂಡಿದ್ದುಸಂಪರ್ಕ ಅಸ್ತವ್ಯಸ್ತಗೊಂಡಿದೆ. ಸೇತುವೆ ಮೇಲೆ ನಡೆದುಕೊಂಡು ಹೋಗಲು ಸಾಧ್ಯವಾಗಿದ್ದು, ಈ ಭಾಗಕ್ಕೆ ಯಾವುದೇ ಪರ್ಯಾಯ ರಸ್ತೆ ಇಲ್ಲ, ಮಳೆಯ ಹೆಚ್ಚಿದಲ್ಲಿ ನೀರಿನ ರಭಸಕ್ಕೆ ಸೇತುವೆ ಪೂರ್ತಿ ಕುಸಿದಲ್ಲಿ ಈ ಪ್ರದೇಶ ಸಂಪರ್ಕ ಕಳೆದುಕೊಳ್ಳಲಿದೆ. ಕಳೆದ ಮೂರು ವರ್ಷದ ಹಿಂದೆ ನಿರ್ಮಾಣಗೊಂಡ ಈ ಸೇತುವೆಯ ದುಸ್ಥಿತಿಗೆ ಜನರು ಬೇಸರಿಸಿದ್ದಾರೆ.

ಸದ್ರಿ ಸ್ಥಳಕ್ಕೆ ಪಿಡಿಓ ಮೋಹನ್ ಬಂಗೇರ, ಗ್ರಾಮ ಆಡಳಿತಾಧಿಕಾರಿ ಸಂತೋಷ್ ರವರು ಭೇಟಿ ನೀಡಿ ಪರಿಶೀಲಿಸಿದ್ದು ಸಂಚಾರವನ್ನು ನಿರ್ಬಂಧಿಸಲಾಗಿದೆ.

Related posts

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!