August 2, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದ ಕುಕ್ಕವುನಿಂದ ಕೂಡಬೆಟ್ಟು ಸದಾಶಿವ ದೇಗುಲ ಕಡೆಗೆ ಸಂಪರ್ಕ ಕಲ್ಪಿಸುವ ಪಾದೆ ಸೇತುವೆ ಕಿರು ಸೇತುವೆ ಸಮೀಪ ಭಾರಿ ಮಳೆಗೆ ರಸ್ತೆ ಬಿರುಕು ಬಿಟ್ಟಿದ್ದು ಈ ಪ್ರದೇಶದ ವಾಹನ ಸಂಚಾರ ಸ್ಥಗಿತಗೊಂಡಿದೆ.

ಆ. 2 ರ ತಡ ರಾತ್ರಿಯ ಮಳೆಯ ಅಬ್ಬರಕ್ಕೆ ಕುಸಿತಗೊಂಡ ಘಟನೆ. ನಡೆದಿದೆ. ಈ ಹಿಂದೆ ಪ್ರವಾಹದಿಂದ ಹಾನಿಯಾಗಿದ್ದ ಈ ಪ್ರದೇಶದಲ್ಲಿ ನೂತನ ಸೇತುವೆ ನಿರ್ಮಾಣ ಗೊಂಡ ಒಂದೇ ವರ್ಷದಲ್ಲೀ ಸೇತುವೆ ಕೆಳಭಾಗದ ತಡೆಗೋಡೆ ಕೊರೆಯಲಾರಂಭಿಸಿತ್ತು ಈ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸೇತುವೆ ಕುಸಿಯಲು ಕಾರಣ ಎನ್ನುತ್ತಾರೆ ಸ್ಥಳೀಯರು.

ಈ ಭಾಗದಲ್ಲಿ ಸುಮಾರು 50 ಮನೆಗಳಿದ್ದು ಸೇತುವೆ ಕುಸಿತ ಹಿನ್ನಲೆ ವಾಹನ ಸಂಚಾರ ಸ್ಥಗಿತಗೊಂಡಿದ್ದುಸಂಪರ್ಕ ಅಸ್ತವ್ಯಸ್ತಗೊಂಡಿದೆ. ಸೇತುವೆ ಮೇಲೆ ನಡೆದುಕೊಂಡು ಹೋಗಲು ಸಾಧ್ಯವಾಗಿದ್ದು, ಈ ಭಾಗಕ್ಕೆ ಯಾವುದೇ ಪರ್ಯಾಯ ರಸ್ತೆ ಇಲ್ಲ, ಮಳೆಯ ಹೆಚ್ಚಿದಲ್ಲಿ ನೀರಿನ ರಭಸಕ್ಕೆ ಸೇತುವೆ ಪೂರ್ತಿ ಕುಸಿದಲ್ಲಿ ಈ ಪ್ರದೇಶ ಸಂಪರ್ಕ ಕಳೆದುಕೊಳ್ಳಲಿದೆ. ಕಳೆದ ಮೂರು ವರ್ಷದ ಹಿಂದೆ ನಿರ್ಮಾಣಗೊಂಡ ಈ ಸೇತುವೆಯ ದುಸ್ಥಿತಿಗೆ ಜನರು ಬೇಸರಿಸಿದ್ದಾರೆ.

Related posts

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya
error: Content is protected !!