August 2, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 3ರಂದು ತುರ್ತು ಸಭೆ ನಡೆಯಲಿದೆ.

ಆಗಸ್ಟ್ 3, 2026ರಂದು ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು.

ಈ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಟಾಸ್ಕ್ ಫೋರ್ಸ್ ತಂಡಗಳ ಮುಖ್ಯಸ್ಥರು, ರೋವರ್ಸ್ ಮತ್ತು ರೇಂಜರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಅಲ್ಲದೆ, ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪ್ರತಿನಿಧಿಗಳಿಗೂ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದ್ದು, ಭಾರೀ ಮಳೆಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಮನ್ವಯ ಮತ್ತು ತ್ವರಿತ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಅವರ ಕಚೇರಿ ಶ್ರಮಿಕ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿಗಳ ಬೇಡಿಕೆಗಳಿಗೆ ಒಪ್ಪಿದ ಕೇಂದ್ರ ಸರಕಾರ: ಉಪವಾಸ ಸತ್ಯಾಗ್ರಹ ಹಿಂಪಡೆದ ಶೇಖರ್ ಲಾಯಿಲ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya
error: Content is protected !!