August 2, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿಸಮಸ್ಯೆ

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ.

ಬಾಲಕೃಷ್ಣ ಗೌಡ ಅವರು ಎಂದಿನಂತೆ ದಿನಗೂಲಿ ಕೆಲಸಕ್ಕೆ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು.

Oplus_131072

ಈ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯ ಮಧ್ಯೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಸಮೀಪದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದವು. ಇದರಿಂದ ಕಾಡಾನೆ ದಾಳಿ ನಡೆಸಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು.

Oplus_131072

ಅನುಮಾನದ ಮೇರೆಗೆ ಸ್ಥಳೀಯರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!