ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಸಿಬ್ಬಂದಿಗಳಿಗೆ ವೃತ್ತಿಪರ ಸಾಮರ್ಥ್ಯ ವೃದ್ಧಿ ಹಾಗೂ ಕೌಶಲ್ಯಾಧರಿತ ಅಭಿವೃದ್ಧಿ ತರಭೇತಿಯ ಕುರಿತು ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು.
ವೈದ್ಯಕೀಯ ಸೂಕ್ಷ್ಮ ಜೀವಶಾಸ್ತ್ರಜ್ಞರು ಹಾಗೂ ಪ್ರಾಧ್ಯಾಪಕರು, ತರಭೇತುದಾರರಾದ ರೋಮೊ ನಾಯಕ್ ಇವರು ಸಂಸ್ಥೆಗೆ ಆಗಮಿಸಿ ಬೋಧಕ ವೃಂದದವರಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಬೇಕಾದ ಭಾಷಾ ಕೌಶಲ್ಯ, ಉತ್ತಮ ಸಂವಹನ ಕಲೆ, ನಾಯಕತ್ವದ ಕುರಿತಾದ ವೃತ್ತಿಪರ ಹಾಗೂ ಕೌಶಲ್ಯಾಧರಿತ ವೈಯಕ್ತಿಕ ಅಭಿವೃದ್ಧಿಗೆ ಬೇಕಾದ ಮಾಹಿತಿ ಕಾರ್ಯಗಾರದೊಂದಿಗೆ ಉದ್ಯೋಗ ಅವಕಾಶಗಳನ್ನು ಹೇಗೆ ಸೃಷ್ಟಿಸಿಕೊಳ್ಳಬಹುದು ಹಾಗೂ ಭಾಷಾ ಕೌಶಲ್ಯಕ್ಕೆ ಎದುರಾಗುವ ಸವಾಲುಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಸಂಸ್ಥೆಯ ಕಾರ್ಯದರ್ಶಿಗಳಾದ ಶಿವಾನಿ ಆರ್ ನಾಥ್, ಟ್ರಸ್ಟಿ ಯಜ್ಞೇಶ್ ರಾಜ್ ,ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ ಜಿ.ನಾಯಕ್, ಮುಖ್ಯೋಪಾಧ್ಯಾಯಿನಿ ವಿಜಯ.ಕೆ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ. ನಾಯಕ್ ವಂದಿಸಿದರು.













