September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

ಬೆಳ್ತಂಗಡಿ: 2025–26ನೇ ಸಾಲಿನ ರಾಷ್ಟ್ರಮಟ್ಟದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 6ನೇ ತರಗತಿಯ ಭಾನ್ವಿ ಹಾಗೂ ಆದ್ಯ ಆರ್., 7ನೇ ತರಗತಿಯ ಅಭಿಜ್ಞಾ ಮತ್ತು ಪರಿಣಿತ, 8ನೇ ತರಗತಿಯ ಸಾನ್ವಿ ಜೆ. ಶೆಟ್ಟಿ ಹಾಗೂ ದಿಶಾ ಹೆಗ್ಡೆ, 9ನೇ ತರಗತಿಯ ಹಿತಾ ಜೆ. ಸೇರಿದಂತೆ ಒಟ್ಟು ಏಳು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಆ01 ರಂದು ಬೆಂಗಳೂರಿನ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ನಡೆದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯ ಘಟಿಕೋತ್ಸವದಲ್ಲಿ ಪದ್ಮಶ್ರೀ ಪುರಸ್ಕೃತರಾದ ಡಾ. ಎಸ್. ಜಿ. ಸುಶೀಲಮ್ಮ ಅವರ ಸಮ್ಮುಖದಲ್ಲಿ ಪದಕ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪತ್ರ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ. ಆರ್. ಅವರ ಪ್ರೋತ್ಸಾಹ ಮತ್ತು ಸಹಕಾರದೊಂದಿಗೆ ಪರೀಕ್ಷಾ ಸಂಯೋಜಕಿಯಾಗಿರುವ ಶಿಕ್ಷಕಿ ಶ್ರೀಮತಿ ಪ್ರವೀಣಾ ಕಾಮತ್ ಅವರ ಸಮರ್ಪಕ ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ.

ವಿದ್ಯಾರ್ಥಿಗಳ ಈ ರಾಷ್ಟ್ರಮಟ್ಟದ ಸಾಧನೆಯು ಶಾಲೆಗೆ ಕೀರ್ತಿ ತಂದಿದ್ದು, ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಹಿತೈಷಿಗಳು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya
error: Content is protected !!