ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುಗಳನ್ನು ಸೇವಿಸಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಘಟನೆ ಆ.2 ರಂದು ಸಂಜೆ ನಡೆದಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ ರವರು ಆ.2 ರಂದು ಸಂಜೆ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಗುರುವಾಯನಕೆರೆಯ ಪೊಟ್ಟುಕೆರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಅಮಲಿನಲ್ಲಿರುವುದನ್ನು ಕಂಡು ವಿಚಾರಿಸಿದಾಗ ನಶೆಯ ಅಮಲಿನಲ್ಲಿದ್ದ ಸದ್ರಿ ವ್ಯಕ್ತಿಯು ನಿಷೇದಿತ ಮಾದಕ ವಸ್ತುವನ್ನು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಆತನ ಹೆಸರು ವಿಳಾಸ ಕೇಳಲಾಗಿ, ಕುವೆಟ್ಟು ನಿವಾಸಿ ಶ್ರೀರಾಜ್ ಶೆಟ್ಟಿ (36ವ) ಎಂಬುದಾಗಿ ತಿಳಿಸಿರುತ್ತಾನೆ. ಸದ್ರಿ ಆಪಾದಿತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದಾಗ, ಆತನು ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ ನಂ : ೮೩/೨೦೨೬ ಕಲಂ: ೨೭(b) ಮತ್ತು ೨೨(ಚಿ) ಎನ್.ಡಿ.ಪಿ.ಎಸ್ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.













