24 C
ಪುತ್ತೂರು, ಬೆಳ್ತಂಗಡಿ
August 3, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಪೊಟ್ಟುಕೆರೆ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುಗಳನ್ನು ಸೇವಿಸಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಘಟನೆ ಆ.2 ರಂದು ಸಂಜೆ ನಡೆದಿದೆ.


ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ ರವರು ಆ.2 ರಂದು ಸಂಜೆ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಗುರುವಾಯನಕೆರೆಯ ಪೊಟ್ಟುಕೆರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಅಮಲಿನಲ್ಲಿರುವುದನ್ನು ಕಂಡು ವಿಚಾರಿಸಿದಾಗ ನಶೆಯ ಅಮಲಿನಲ್ಲಿದ್ದ ಸದ್ರಿ ವ್ಯಕ್ತಿಯು ನಿಷೇದಿತ ಮಾದಕ ವಸ್ತುವನ್ನು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಆತನ ಹೆಸರು ವಿಳಾಸ ಕೇಳಲಾಗಿ, ಕುವೆಟ್ಟು ನಿವಾಸಿ ಶ್ರೀರಾಜ್ ಶೆಟ್ಟಿ (36ವ) ಎಂಬುದಾಗಿ ತಿಳಿಸಿರುತ್ತಾನೆ. ಸದ್ರಿ ಆಪಾದಿತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದಾಗ, ಆತನು ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ ನಂ : ೮೩/೨೦೨೬ ಕಲಂ: ೨೭(b) ಮತ್ತು ೨೨(ಚಿ) ಎನ್.ಡಿ.ಪಿ.ಎಸ್ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya
error: Content is protected !!