26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಜುಲೈ ತಿಂಗಳ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿಯು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. ಘಟಕದ ಕಾರ್ಯ ವೈಖರಿಯನ್ನು ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ ಅವರು ಶ್ಲಾಘಿಸುತ್ತಾ ಮುಂದಿನ ವಲಯ ಹಾಗೂ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಘಟಕದ ವತಿಯಿಂದ ಫಲ್ಗುಣಿ ಪ್ರಾಂತ್ಯದ ವಲಯ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಆಯುಷ್ ಜೈನ್ ಅವರು ಅತಿಥಿಗಳನ್ನು ಆಹ್ವಾನಿಸಿ ಸಭೆಗೆ ವಲಯ ಉಪಾಧ್ಯಕ್ಷರನ್ನು ಪರಿಚಯಿಸಿದರು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದಕ್ಷ ಜೈನ್ ವಾಚಿಸಿದರು.

ಈ ಸಂದರ್ಭದಲ್ಲಿ ಜುಲೈ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಯೋಗೀಶ್ ಎಸ್., ರೇಷ್ಮಾ ಡಿ ಅಲ್ಮೇಡಾ ಮತ್ತು ಅಕ್ಷತ್ ರೈ ಅವರಿಗೆ ಶುಭಾಶಯವನ್ನು ಸಲ್ಲಿಸಲಾಯಿತು. ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಡಾ. ಶೋಭಾ ಪಿ‌., ಕೆ. ಶ್ರೀಧರ ರಾವ್, ಸಂತೋಷ್ ಜೈನ್, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ನಿತ್ಯಾನಂದ ರೈ ಹಾಗೂ ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya
error: Content is protected !!