August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಆ.12: ಬೆಳ್ತಂಗಡಿಯಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 588 ನೇ ಸೇವಾ ಯೋಜನೆಯ 3ನೇ ವರ್ಷದ ಆಟಿದ ಕಷಾಯ ಮತ್ತು ಮೆತ್ತೆ ಗಂಜಿ ವಿತರಣಾ ಕಾರ್ಯಕ್ರಮ ಆ.12 ರಂದು ಬೆಳಿಗ್ಗೆ 6 ರಿಂದ ಬೆಳಗ್ಗೆ 10 ಗಂಟೆ ತನಕ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ಇವರು ಉದ್ಘಾಟಿಸಲಿದ್ದಾರೆ . ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ .

ಕಳೆದ ವರ್ಷ ಒಂದು ಸಾವಿರಕ್ಕಿಂತ ಅಧಿಕ ಸಾರ್ವಜನಿಕರು ಸದುಪಯೋಗಪಡಿಸಿಕೊಂಡಿದಿದ್ದು, ಬೆಳಿಗ್ಗೆ ಆರು ಗಂಟೆಯ ಮೊದಲೇ ಸಾರ್ವಜನಿಕರು ಅವರವರ ಮನೆಗೆ ತೆಗೆದುಕೊಂಡು ಹೋಗಲು ಬಾಟ್ಲಿಗಳನ್ನು ಕೂಡ ಹಿಡಿದುಕೊಂಡು ಬಂದಿದ್ದರು ಎಂದು ಸಂತಸ ವ್ಯಕ್ತಪಡಿಸಿ ಈ ಕಾರ್ಯಕ್ರಮ ಮಾಡಲು ನಮಗೆ ಇನ್ನಷ್ಟು ಸ್ಪೂರ್ತಿಯಾಗಿದೆ ಎಂದು ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!