26 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಸಿಬ್ಬಂದಿ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಸಿಬ್ಬಂದಿಗಳಿಗೆ ವೃತ್ತಿಪರ ಸಾಮರ್ಥ್ಯ ವೃದ್ಧಿ ಹಾಗೂ ಕೌಶಲ್ಯಾಧರಿತ ಅಭಿವೃದ್ಧಿ ತರಭೇತಿಯ ಕುರಿತು ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು.

ವೈದ್ಯಕೀಯ ಸೂಕ್ಷ್ಮ ಜೀವಶಾಸ್ತ್ರಜ್ಞರು ಹಾಗೂ ಪ್ರಾಧ್ಯಾಪಕರು, ತರಭೇತುದಾರರಾದ ರೋಮೊ ನಾಯಕ್ ಇವರು ಸಂಸ್ಥೆಗೆ ಆಗಮಿಸಿ ಬೋಧಕ ವೃಂದದವರಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಬೇಕಾದ ಭಾಷಾ ಕೌಶಲ್ಯ, ಉತ್ತಮ ಸಂವಹನ ಕಲೆ, ನಾಯಕತ್ವದ ಕುರಿತಾದ ವೃತ್ತಿಪರ ಹಾಗೂ ಕೌಶಲ್ಯಾಧರಿತ ವೈಯಕ್ತಿಕ ಅಭಿವೃದ್ಧಿಗೆ ಬೇಕಾದ ಮಾಹಿತಿ ಕಾರ್ಯಗಾರದೊಂದಿಗೆ ಉದ್ಯೋಗ ಅವಕಾಶಗಳನ್ನು ಹೇಗೆ ಸೃಷ್ಟಿಸಿಕೊಳ್ಳಬಹುದು ಹಾಗೂ ಭಾಷಾ ಕೌಶಲ್ಯಕ್ಕೆ ಎದುರಾಗುವ ಸವಾಲುಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಶಿವಾನಿ ಆರ್ ನಾಥ್, ಟ್ರಸ್ಟಿ ಯಜ್ಞೇಶ್ ರಾಜ್ ,ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ ಜಿ.ನಾಯಕ್, ಮುಖ್ಯೋಪಾಧ್ಯಾಯಿನಿ ವಿಜಯ.ಕೆ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ. ನಾಯಕ್ ವಂದಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಯೋಜನಾ ಪ್ರಾಧಿಕಾರ ರಚನೆಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತ ಶಿವಾನಂದ ಕಾಪಶಿ ಹಾಗೂ ನಗರ–ಗ್ರಾಮಾಂತರ ಯೋಜನಾ ಆಯುಕ್ತರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya
error: Content is protected !!