August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

ಮಡಂತ್ಯಾರು: ಗೆಳೆಯರ ಬಳಗ ಮಾಣಿಂಜ ಕುಕ್ಕಳ ಊರ ಪರವೂರ ಹಿಂದೂ ಬಾಂಧವರ ಕೂಡುವಿಕೆಯಲ್ಲಿ ಆಟಿಡೊಂಜಿ ಕೆಸರ್ದ ಗೊಬ್ಬು ಗ್ರಾಮೀಣ ಕ್ರೀಡೋತ್ಸವವು ಆ.2 ರಂದು ಮಾಣಿಂಜ ನಿರ್ಪಾರಿ ಗದ್ದೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಿವೃತ್ತ ಮುಖ್ಯಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರು ಗದ್ದೆಗೆ ಹಾಲು ಎರೆದು ಕೆಸರ್ದ ಗೊಬ್ಬು ಕಾರ್ಯಕ್ರಮ ಉದ್ಘಾಟನೆಗೊಳಿಸಿದರು.

ಬೆಳಗ್ಗಿನಿಂದ ಸಂಜೆಯ ತನಕ ತುಳುನಾಡ ಶೈಲಿಯ ವಿವಿಧ ಸ್ಪರ್ಧೆಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಈ ಸಂದರ್ಭ ಇತ್ತೀಚೆಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆಗೈದು ನಿವೃತ್ತಿಗೊಂಡ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರನ್ನು ಧಾರ್ಮಿಕ ಮುಖಂಡ ಕಿರಣಚಂದ್ರ ಪುಷ್ಪಗಿರಿ ಶಾಲು ಹೊದಿಸಿ ಭಗವದ್ಗೀತೆ ಪುಸ್ತಕ ನೀಡಿ ಸನ್ಮಾನಿಸಿ ಗೌರವಿಸಿದರು. ಹಾಗೂ ಇವರು ಕುಂಜತ್ತೋಡಿ ಶಾಲೆಯಲ್ಲಿ ಸೇವೆಸಲ್ಲಿಸಿದ್ದು ಇಲ್ಲಿಯ ಶಾಲಾ ವಿದ್ಯಾರ್ಥಿಗಳು ಹಾಗೂ ಗೆಳೆಯರ ಬಳಗ ಮಾಣಿಂಜ ಇವರ ವತಿಯಿಂದ ಕೂಡ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು.

Related posts

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya
error: Content is protected !!