September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

ಬೆಳ್ತಂಗಡಿ: 2025–26ನೇ ಸಾಲಿನ ರಾಷ್ಟ್ರಮಟ್ಟದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 6ನೇ ತರಗತಿಯ ಭಾನ್ವಿ ಹಾಗೂ ಆದ್ಯ ಆರ್., 7ನೇ ತರಗತಿಯ ಅಭಿಜ್ಞಾ ಮತ್ತು ಪರಿಣಿತ, 8ನೇ ತರಗತಿಯ ಸಾನ್ವಿ ಜೆ. ಶೆಟ್ಟಿ ಹಾಗೂ ದಿಶಾ ಹೆಗ್ಡೆ, 9ನೇ ತರಗತಿಯ ಹಿತಾ ಜೆ. ಸೇರಿದಂತೆ ಒಟ್ಟು ಏಳು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಆ01 ರಂದು ಬೆಂಗಳೂರಿನ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ನಡೆದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯ ಘಟಿಕೋತ್ಸವದಲ್ಲಿ ಪದ್ಮಶ್ರೀ ಪುರಸ್ಕೃತರಾದ ಡಾ. ಎಸ್. ಜಿ. ಸುಶೀಲಮ್ಮ ಅವರ ಸಮ್ಮುಖದಲ್ಲಿ ಪದಕ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪತ್ರ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ. ಆರ್. ಅವರ ಪ್ರೋತ್ಸಾಹ ಮತ್ತು ಸಹಕಾರದೊಂದಿಗೆ ಪರೀಕ್ಷಾ ಸಂಯೋಜಕಿಯಾಗಿರುವ ಶಿಕ್ಷಕಿ ಶ್ರೀಮತಿ ಪ್ರವೀಣಾ ಕಾಮತ್ ಅವರ ಸಮರ್ಪಕ ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ.

ವಿದ್ಯಾರ್ಥಿಗಳ ಈ ರಾಷ್ಟ್ರಮಟ್ಟದ ಸಾಧನೆಯು ಶಾಲೆಗೆ ಕೀರ್ತಿ ತಂದಿದ್ದು, ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಹಿತೈಷಿಗಳು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya
error: Content is protected !!