26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

ಬೆಳ್ತಂಗಡಿ: 2025–26ನೇ ಸಾಲಿನ ರಾಷ್ಟ್ರಮಟ್ಟದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 6ನೇ ತರಗತಿಯ ಭಾನ್ವಿ ಹಾಗೂ ಆದ್ಯ ಆರ್., 7ನೇ ತರಗತಿಯ ಅಭಿಜ್ಞಾ ಮತ್ತು ಪರಿಣಿತ, 8ನೇ ತರಗತಿಯ ಸಾನ್ವಿ ಜೆ. ಶೆಟ್ಟಿ ಹಾಗೂ ದಿಶಾ ಹೆಗ್ಡೆ, 9ನೇ ತರಗತಿಯ ಹಿತಾ ಜೆ. ಸೇರಿದಂತೆ ಒಟ್ಟು ಏಳು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಆ01 ರಂದು ಬೆಂಗಳೂರಿನ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ನಡೆದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯ ಘಟಿಕೋತ್ಸವದಲ್ಲಿ ಪದ್ಮಶ್ರೀ ಪುರಸ್ಕೃತರಾದ ಡಾ. ಎಸ್. ಜಿ. ಸುಶೀಲಮ್ಮ ಅವರ ಸಮ್ಮುಖದಲ್ಲಿ ಪದಕ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪತ್ರ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ. ಆರ್. ಅವರ ಪ್ರೋತ್ಸಾಹ ಮತ್ತು ಸಹಕಾರದೊಂದಿಗೆ ಪರೀಕ್ಷಾ ಸಂಯೋಜಕಿಯಾಗಿರುವ ಶಿಕ್ಷಕಿ ಶ್ರೀಮತಿ ಪ್ರವೀಣಾ ಕಾಮತ್ ಅವರ ಸಮರ್ಪಕ ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ.

ವಿದ್ಯಾರ್ಥಿಗಳ ಈ ರಾಷ್ಟ್ರಮಟ್ಟದ ಸಾಧನೆಯು ಶಾಲೆಗೆ ಕೀರ್ತಿ ತಂದಿದ್ದು, ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಹಿತೈಷಿಗಳು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!