26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮೀಣ ಜನರಿಗೆ ಬ್ಯಾಂಕಿಂಗ್ ಸೇವೆ ತಲುಪಿಸಿದ ಯಶೋಗಾಧೆ

ಬೆಳ್ತಂಗಡಿ: ಸುರೇಖಾ ಅವರು ಅವರು ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಇದರಲ್ಲಿ ಬ್ಯಾಂಕ್ ಕರೆಸ್ಪಾಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸೇವೆಯಿಂದ ಗ್ರಾಮದಲ್ಲಿನ ಜನರಿಗೆ ಬ್ಯಾಂಕಿಂಗ್ ಸೇವೆಗಳು ಸುಲಭವಾಗಿ ಹಾಗೂ ತ್ವರಿತವಾಗಿ ಲಭ್ಯವಾಗಿದೆ.

ಗ್ರಾಮದ ವೃದ್ಧರು ಮಹಿಳೆಯರು ರೈತರು ಹಾಗೂ ಕೂಲಿ ಕಾರ್ಮಿಕರು, ಬ್ಯಾಂಕ್‌ಗೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಬಹಳಷ್ಟು ಕಡಿಮೆಯಾಗಿದೆ. ಹಣ ಠೇವಣಿ, ಹಣ ಹಿಂಪಡೆಯುವುದು ಆಧಾರ್ ಆಧಾರಿತ ವಹಿವಾಟು, ಖಾತೆ ತೆರೆಯುವುದು, ಸರ್ಕಾರಿ ಯೋಜನೆಗಳ ಹಣ ವಿತರಣೆ ಹಾಗೂ ಇತರ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಮದಲ್ಲಿಯೇ ಒದಗಿಸುವ ಮೂಲಕ ಜನರ ಸಮಯ ಮತ್ತು ವೆಚ್ಚ ಉಳಿತಾಯವಾಗುತ್ತಿದೆ. ಸುರೇಖಾ ಅವರ ನಿರಂತರ ಸೇವೆಯಿಂದ ಗ್ರಾಮದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಹೆಚ್ಚಿದ್ದು ನಗದು ರಹಿತ ವ್ಯವಹಾರಗಳ ಬಳಕೆಯ ವೃದ್ಧಿ ಮತ್ತು ಬ್ಯಾಂಕ್ ರಜಾ ದಿನಗಳಲ್ಲೂ ಸೇವೆ ಸಲ್ಲಿಸುವುದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ವಿಶೇಷವಾಗಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಹಿರಿಯ ನಾಗರಿಕರು ಈ ಸೇವೆಯಿಂದ ಹೆಚ್ಚಿನ ಪ್ರಯೋಜನ ಪಡೆದಿದ್ದಾರೆ.

ಪ್ರಸ್ತುತ ಇವರ ಸೇವೆಯಾದ ಗ್ರಾಮದಲ್ಲಿ1300ಕ್ಕೂ ಹೆಚ್ಚು ಕುಟುಂಬಗಳು ಬ್ಯಾಂಕಿಂಗ್ ಸೌಲಭ್ಯವನ್ನು ಪಡೆದುಕೊಂಡಿದ್ದು ಪ್ರತಿದಿನ ಸರಾಸರಿ 5 ಲಕ್ಷ ವಹಿವಾಟುಗಳು ನಡೆಯುತ್ತಿವೆ. ಜನರ ವಿಶ್ವಾಸಗಳಿಸಿರುವ ಸುರೇಖಾ ಅವರ ಕಾರ್ಯ ಗ್ರಾಮೀಣ ಆರ್ಥಿಕ ಸಬಲೀಕರಣಕ್ಕೆ ಉತ್ತಮ ಮಾದರಿಯಾಗಿದೆ.

Related posts

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!