26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಲ್ಲಿ ಸಂಭ್ರಮದ ‘ಆಟಿಡೊಂಜಿ ದಿನ’ ಆಚರಣೆ

ಬೆಳ್ತಂಗಡಿ:ಹಿಂದಿನ ಕೂಡು ಕುಟುಂಬಗಳ ಜೀವನದಲ್ಲಿ ನೆಮ್ಮದಿ, ಸೌಹಾರ್ದತೆ ಹಾಗೂ ಆರೋಗ್ಯಕರ ಆಹಾರ ಪದ್ಧತಿ ಇತ್ತು. ಆ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ರಾಜೀವ್ ಸಾಲಿಯಾನ್ ಹೇಳಿದರು.

ಅವರು ಆ 2ರಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಹಾಗೂ ಮಹಿಳಾ ಬಿಲ್ಲವ ವೇದಿಕೆಗಳ ಆಶ್ರಯದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಘದ ಮಾಜಿ ಅಧ್ಯಕ್ಷ ಹಾಗೂ ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್. ವಿವಿಧ ವೈವಿಧ್ಯಮಯ ಮನರಂಜನಾ ಸ್ಪರ್ಧೆಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಸಮಿತಿಯ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕ್‌ನ ಶಾಖಾ ನಿರೀಕ್ಷಕಿ ಮಾಲಾ ಎಂ.ಕೆ. ಹಾಗೂ ಬಡಕೋಡಿ ಶಿಕ್ಷಕಿ ಸೌಮ್ಯ ಆಟಿ ತಿಂಗಳ ಆಚರಣೆ, ಅದರ ಸಾಂಸ್ಕೃತಿಕ ಮಹತ್ವ ಹಾಗೂ ಆರೋಗ್ಯಕರ ಆಹಾರ ಪದ್ಧತಿಯ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಭಾರತಿ ಸಂತೋಷ್, ಕಾರ್ಯದರ್ಶಿ ಸಂಧ್ಯಾ ಹೆಚ್.ಡಿ., ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಶರತ್ ಅಂಚನ್ ಹಾಗೂ ಸತೀಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿನಿಯರಾದ ದಿಯಾ ಎಂ. ಕೋಟ್ಯಾನ್ ಮತ್ತು ಧೃತಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಅಲ್ಲದೆ ಆಟಿ ತಿಂಗಳ ಸುಮಾರು 52 ಬಗೆಯ ಸಾಂಪ್ರದಾಯಿಕ ಖಾದ್ಯಗಳನ್ನು ತಯಾರಿಸಿ ತಂದ ಮಹಿಳೆಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಹಳೆಯ ಕೃಷಿ ಹಾಗೂ ಗೃಹಬಳಕೆಯ ಪರಿಕರಗಳ ಪ್ರದರ್ಶನವೂ ವಿಶೇಷ ಆಕರ್ಷಣೆಯಾಗಿತ್ತು.

ಸಂಘದ ಮಾಜಿ ಅಧ್ಯಕ್ಷೆ ಪುಷ್ಪಾ ಗಿರೀಶ್ ಪ್ರಾರ್ಥಿಸಿದರು. ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್ ಕಾರ್ಯಕ್ರಮ ನಿರೂಪಿಸಿದರೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಭಾರತಿ ಸಂತೋಷ್ ವಂದಿಸಿದರು. ಸಮಿತಿಯ ನಿರ್ದೇಶಕರು,ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya
error: Content is protected !!