32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಗೆ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಗೌರವ-ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಟಿವಿ ಲೀಡರ್ ಅವಾರ್ಡ್ 2025 ‘ಉತ್ತಮ ಶಾಸಕ’ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರನ್ನು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಆ.2ರಂದು ಅವರ ನಿವಾಸದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮುದಾಯದಲ್ಲಿರುವ ವಿವಿಧ ಸಮಸ್ಯೆ ಹಾಗೂ ಅದರ ಪರಿಹಾರದ ಕುರಿತು ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ ಹಾಗೂ ತಾಲೂಕು ಘಟಕದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ ಚರ್ಚಿಸಿದರು. ಇದೇ ವೇಳೆ ಧರ್ಮಸ್ಥಳ ವಲಯ ಘಟಕದ ವತಿಯಿಂದ ಧರ್ಮಸ್ಥಳದಲ್ಲಿ ಸಮುದಾಯ ಭವನಕ್ಕೆ ಜಮೀನು, ಪ್ರತ್ಯೇಕ ರುದ್ರಭೂಮಿ ಹಾಗೂ ಬಡ ಕುಟುಂಬಗಳಿಗೆ ವಸತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಜಮೀನು ಒದಗಿಸಿಕೊಡುವಂತೆ ಶಾಸಕರಿಗೆ ವಿಶೇಷ ಮನವಿಯನ್ನು ಸಲ್ಲಿಸಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆಯನ್ನು ನೀಡಿದರು.

ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ, ಸಂಘಟನೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಲಕ್ಷö್ಮಣ್ ಜಿ.ಎಸ್., ರಾಘವ ಕಲ್ಮಂಜ, ರಾಮು ಪಡಂಗಡಿ, ಕು. ಗೌರಿ ತಾಲೂಕು ಘಟಕದ ಸದಸ್ಯರು, ಧರ್ಮಸ್ಥಳ ವಲಯ ಘಟಕದ ಅಧ್ಯಕ್ಷರಾದ ಗಣೇಶ್ ಡಿ., ಉಪಾಧ್ಯಕ್ಷೆ ಶ್ರೀಮತಿ ಸುಜಾತ, ಸದಸ್ಯರಾದ ಶ್ರೀಮತಿ ಸುನೀತಾ, ಕು. ಜ್ಯೋತಿ, ಶ್ರೀಮತಿ ಆಶಾ, ಕು. ವನಿತಾ ಉಪಸ್ಥಿತರಿದ್ದರು.

Related posts

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!